Advertisement
ವಿಜ್ಞಾನ

#Chandrayaana | ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3 : ಜುಲೈ 14ಕ್ಕೆ ನಭಕ್ಕೆ ಚಿಮ್ಮಲಿದೆ ಚಂದ್ರನ ಪರಿಶೋಧನಾ ಮಿಷನ್

Share
ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಪರಿಶೋಧನಾ ಮಿಷನ್ ಚಂದ್ರಯಾನ-3 ಗೆ#Chandrayaan-3 ಇಂದಿನಿಂದ ಕೌಂಟ್‌ಡೌನ್ ಶುರುವಾಗಲಿದೆ. ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಇಸ್ರೋ ವಿಜ್ಞಾನಿಗಳು ಪೂಜೆ ಸಲ್ಲಿಸಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ #ISRO ಇಂದು (ಜುಲೈ 13 ರಂದು) ಮಧ್ಯಾಹ್ನ 1.05 ಕ್ಕೆ 26 ಗಂಟೆಗಳ ಕೌಂಟ್‌ಡೌನ್ ಪ್ರಾರಂಭವಾಗಲಿದೆ ಎಂದು ಹೇಳಿದೆ. ನಾಳೆ (ಜುಲೈ 14 ರಂದು) ಮಧ್ಯಾಹ್ನ 2.35 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಉಡಾವಣೆವಾಗಲಿದೆ ಎಂದು ಹೇಳಲಾಗಿದೆ. ಚಂದ್ರಯಾನ-3 ಕಾರ್ಯಾಚರಣೆ ಚಂದ್ರನ ಕಡೆ ಸಾಗುತ್ತಿರುವ ಭಾರತದ ಮೂರನೇ ಪ್ರಯತ್ನವಾಗಿದೆ. ಜತೆಗೆ ಇದು ರಾಷ್ಟ್ರದ ಬಾಹ್ಯಾಕಾಶ ಪರಿಶೋಧನೆಯಲ್ಲಿ ಮಹತ್ವಾಕಾಂಕ್ಷೆಯ ಸಾಧನೆಯಾಗಿದೆ. ಈಗಾಗಲೇ ಚಂದ್ರಯಾನ-3ಯ ಎಲ್ಲ ಕಾರ್ಯತಂತ್ರಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಭಾರತವು ಚಂದ್ರನಲ್ಲಿ ತನ್ನ ಮಿಷನ್​ನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡುವ ನಾಲ್ಕನೇ ರಾಷ್ಟ್ರವಾಗಲಿದೆ, ಬಾಹ್ಯಾಕಾಶ ಸಂಶೋಧನೆಯ ಕ್ಷೇತ್ರದಲ್ಲಿ ಭಾರತ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಈ ಮೂಲಕ ಪ್ರದರ್ಶಿಸುತ್ತಿದೆ.

ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ#ISRO scientists ತಂಡವು ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ#Tirupati Venkatachalapathy Temple ಆಗಮಿಸಿ ಈ ಯೋಜನೆ ಯಶಸ್ವಿ ಆಗಲಿ ಎಂದು ಪ್ರಾರ್ಥಿಸಿತು. ಚಂದ್ರಯಾನ 3 ಉಡಾವಣೆಯ ಮುನ್ನಾ ದಿನವಾದ ಇಂದು ಮುಂಜಾನೆ ಇಸ್ರೋದ ವೈಜ್ಞಾನಿಕ ಕಾರ್ಯದರ್ಶಿ ಶಾಂತನು ಭಟ್ವಾಡೇಕರ್ ಜೊತೆ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಮಾದರಿಯೊಂದಿಗೆ ಆಗಮಿಸಿ ಪ್ರಾರ್ಥನೆ ಮಾಡಿದರು.

LVM3 ರಾಕೆಟ್ ಉಡಾವಣೆಯಾದ ಸರಿಸುಮಾರು 16 ನಿಮಿಷಗಳ ನಂತರ, ಪ್ರೊಪಲ್ಷನ್ ಮಾಡ್ಯೂಲ್ ಮುಖ್ಯ ರಾಕೆಟ್‌ನಿಂದ ಪ್ರತ್ಯೇಕಗೊಳ್ಳುತ್ತದೆ. ನಂತರ ಅದರಿಂದ ಅಂಡಾಕಾರದ ಚಕ್ರ ಹೊರಗೆ ಬಂದು, ಭೂಮಿಯ ಸುತ್ತ 5 ರಿಂದ 6 ಬಾರಿ ಸುತ್ತುತ್ತದೆ. ಭೂಮಿಯಿಂದ 36,500 ಕಿಮೀ ದೂರದಿಂದ ಸಾಗಿ, ಕ್ರಮೇಣ ಚಂದ್ರನ ಕಕ್ಷೆಯತ್ತ ಬರುತ್ತದೆ. ಇದು ಹೀಗೆ ಪ್ರಯಾಣ ನಡೆಸುತ್ತ ಚಂದ್ರನ ಮೇಲ್ಮೈಯಿಂದ 100 ಕಿಮೀ ಎತ್ತರವನ್ನು ತಲುಪುವವರೆಗೆ ಅದೇ ಸ್ಥಿರವಾದ ವೇಗವನ್ನು ಹೊಂದಿರುತ್ತದೆ.
ತನ್ನ ಸ್ಥಾನವನ್ನು ತಲುಪಿದ ನಂತರ, ಲ್ಯಾಂಡರ್ ಮಾಡ್ಯೂಲ್ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ಲ್ಯಾಂಡಿಂಗ್​​ ಆಗಲು ಶುರು ಮಾಡುತ್ತದೆ. ಈ ಪ್ರಕ್ರಿಯೆ ಈ ತಿಂಗಳ 23 ಅಥವಾ 24ರ ತನಕ ನಡೆಯಲಿದೆ ಎಂದು ಹೇಳಲಾಗಿದೆ. ಈ ಚಂದ್ರಯಾನ-3 ಮಿಷನ್‌ನ ಪ್ರಾಥಮಿಕ ಉದ್ದೇಶವೇನೆಂದರೆ, ಚಂದ್ರನ ಕಕ್ಷೆಯಿಂದ ಭೂಮಿಯನ್ನು ಅಧ್ಯಯನ ಮಾಡುವುದು ಮತ್ತು ಅದರ ಸಾಂದ್ರತೆಯ ಬದಲಾವಣೆಗಳನ್ನು ಅಳೆಯುವುದು, ಜತೆಗೆ ಧ್ರುವ ಪ್ರದೇಶದಲ್ಲಿನ ಚಂದ್ರನ ಮೇಲ್ಮೈಯ ಉಷ್ಣ ಗುಣಲಕ್ಷಣಗಳನ್ನು ವಿಶ್ಲೇಷಿಸುವುದು. ಇದು ಲ್ಯಾಂಡಿಂಗ್ ಆದ್ಮೇಲೆ ಚಂದ್ರನ ಸುತ್ತಲೂ ಭೂಕಂಪನ ಚಟುವಟಿಕೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತದೆ, ಇದರ ಜತೆಗೆ ಇದು ಚಂದ್ರನ ಹೊರಪದರ ಮತ್ತು ನಿಲುವಂಗಿಯ ರಚನೆಯ ಒಳನೋಟಗಳನ್ನು ನೀಡುತ್ತದೆ.

-ಅಂತರ್ಜಾಲ ಸಂಗ್ರಹ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

2 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

4 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

4 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

6 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

11 hours ago