Advertisement
ಪ್ರಮುಖ

#AyushmanBharat | ಭಾರತದ ಆಯುಷ್ಮಾನ್ ಯೋಜನೆ ಉತ್ತಮ ಯೋಜನೆ | ಯೋಜನೆಯನ್ನು ಶ್ಲಾಘಿಸಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

Share

ಮೋದಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಸಂಬಂಧಿತ ಕೆಲಸಗಳಿಗೆ ಮಹತ್ವ ಆಯುಷ್ಮಾನ್‌ ಭಾರತ್ #AyushmanBharat ನೀಡುತ್ತಿರುವ ಭಾರತದ ಯೋಜನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ# WHO ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಶ್ಲಾಘಿಸಿದ್ದಾರೆ.

ಗುಜರಾತಿನ ಗಾಂಧಿನಗರದಲ್ಲಿ ನಡೆಯುತ್ತಿರುವ ಜಿ20 ಆರೋಗ್ಯ ಸಚಿವರ ಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಡಾ ಟೆಡ್ರೊಸ್, ತಮ್ಮ ಭಾಷಣದ ಆರಂಭದಲ್ಲಿ, ಜಿ 20 ಶೃಂಗಸಭೆಯನ್ನು ಆಯೋಜಿಸುವಲ್ಲಿ ಭಾರತದ ಆತಿಥ್ಯ ಮತ್ತು ದೂರದೃಷ್ಟಿಯ ನಾಯಕತ್ವಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಜೊತೆಗೆ, ಯುನಿವರ್ಸಲ್ ಹೆಲ್ತ್ ಕವರೇಜ್ ಮತ್ತು ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯನ್ನಾಗಿ ಮುಂದುವರಿಸುವಲಿ ಭಾರತವು ಇಟ್ಟ ಹೆಜ್ಜೆಗಳಿಗಾಗಿ ನಾನು ಶ್ಲಾಘಿಸುತ್ತೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತದಲ್ಲಿನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀಡುತ್ತಿರುವ ಸೇವೆಯ ಬಗ್ಗೆಯೂ ತಮ್ಮ ಭಾಷಣದಲ್ಲಿ ಕೊಂಡಾಡಿದ ಡಾ ಟೆಡ್ರೊಸ್, ನಾನು ಇಲ್ಲಿ ಗಾಂಧಿನಗರದಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಕ್ಕೆ ಭೇಟಿ ನೀಡಿ ಶ್ಲಾಘಿಸಿದರಲ್ಲದೇ, ಗ್ಲೋಬಲ್ ಡಿಜಿಟಲ್ ಹೆಲ್ತ್ ಇನಿಶಿಯೇಟಿವ್‌ಗಾಗಿ ಭಾರತದ G20 ಪ್ರೆಸಿಡೆನ್ಸಿಗೆ ಧನ್ಯವಾದ ಅರ್ಪಿಸಿದರು.

ಇನ್ನು, ಸ್ಥಳೀಯವಾಗಿ ಪ್ರಿಸ್ಕ್ರಿಪ್ಷನ್‌ಗಳು ಮತ್ತು ಚಿಕಿತ್ಸೆಯನ್ನು ಒದಗಿಸುವ ಟೆಲಿಮೆಡಿಸಿನ್ ಸೇವೆಗಳನ್ನು ನಾನು ಇಲ್ಲಿ ಶ್ಲಾಘಿಸುತ್ತೇನೆ. ಇದು ಆರೋಗ್ಯವನ್ನು ಉತ್ತಮ ಗುಣಮಟ್ಟಕ್ಕೆ ಪರಿವರ್ತಿಸುವ ಅತ್ಯುತ್ತಮ ಉದಾಹರಣೆಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಜಿ20 ಆರೋಗ್ಯ ಸಚಿವರ ಸಭೆ ಮತ್ತು ಸೈಡ್ ಈವೆಂಟ್‌ನಲ್ಲಿ ವಿವಿಧ ದೇಶಗಳ 70 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಜಿ20 ಇಂಡಿಯಾ ಪ್ರೆಸಿಡೆನ್ಸಿ ಅಡಿಯಲ್ಲಿ ಮೂರು ದಿನಗಳ ಜಿ20 ಆರೋಗ್ಯ ಮಂತ್ರಿಗಳ ಸಭೆಯು ಇಂದು ಮುಕ್ತಾಯಗೊಂಡಿದೆ. ಭಾರತವು ಡಿಸೆಂಬರ್ 1, 2022 ರಂದು G20 ನ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಪ್ರಸ್ತುತ ಇಂಡೋನೇಷ್ಯಾ, ಭಾರತ ಮತ್ತು ಬ್ರೆಜಿಲ್ ಅನ್ನು ಒಳಗೊಂಡಿರುವ G20 Troika ನ ಭಾಗವಾಗಿದೆ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

7 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

18 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

20 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago