MIRROR FOCUS

ಅಭಿವೃದ್ಧಿ ಕಂಡ ಭಾರತದ ಜಿಡಿಪಿ | 4ನೇ ತ್ರೈಮಾಸಿಕದಲ್ಲಿ 7.8% | 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ. ದೇಶದ ಜನರ ಜೀವನ ಮಟ್ಟ(Standard of living) ಸುಧಾರಿಸಿದೆ. ಈ ವರ್ಷ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

Advertisement
Advertisement

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

ಜಿಡಿಪಿ ಎಂದರೇನು? : ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
Source: ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

10 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

20 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

21 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

21 hours ago