Advertisement
MIRROR FOCUS

ಅಭಿವೃದ್ಧಿ ಕಂಡ ಭಾರತದ ಜಿಡಿಪಿ | 4ನೇ ತ್ರೈಮಾಸಿಕದಲ್ಲಿ 7.8% | 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ |

Share

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ. ದೇಶದ ಜನರ ಜೀವನ ಮಟ್ಟ(Standard of living) ಸುಧಾರಿಸಿದೆ. ಈ ವರ್ಷ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

ಜಿಡಿಪಿ ಎಂದರೇನು? : ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
Source: ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago