ಸಂಪಾದಕೀಯ ಆಯ್ಕೆ

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |

Share

ಭಾರತದ ಇತ್ತೀಚಿನ ಅರಣ್ಯ ಸಮೀಕ್ಷೆ ವರದಿಯ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ದೇಶದ ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ  ಹೆಚ್ಚಳವನ್ನು ಸೂಚಿಸಿದೆ. ಆದರೆ ತಜ್ಞರು ಹೇಳುವಂತೆ  ಜೀವವೈವಿಧ್ಯ-ಸಮೃದ್ಧ ಕಾಡುಗಳು ಮತ್ತು ಮ್ಯಾಂಗ್ರೋವ್‌ಗಳು ಮತ್ತು ಒಟ್ಟಾರೆ ಅರಣ್ಯ ಗುಣಮಟ್ಟದಲ್ಲಿ ಗಣನೀಯ ಕುಸಿತವನ್ನು ಕಂಡಿದೆ ಎಂದು ವರದಿ ಮಾಡಿದ್ದಾರೆ.…..ಮುಂದೆ ಓದಿ….

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ (ಎಫ್‌ಎಸ್‌ಐ) ಪ್ರಕಟಿಸಿದ ವರದಿಯು, 2021 ರಿಂದ ದೇಶದ ಅರಣ್ಯ ಪ್ರದೇಶವು 1,446 ಚದರ ಕಿಲೋಮೀಟರ್ ಹೆಚ್ಚಾಗಿದೆ ಎಂದು ಹೇಳಿದೆ. ಅಂದರೆ 156 ಕಿಮೀ ಅರಣ್ಯ ಹೆಚ್ಚಳವಾಗಿದೆ ಮತ್ತು ಮರದ ಹೊದಿಕೆಯು 1,289 ಕಿಮೀ ಹೆಚ್ಚಳವಾಗಿದೆ.

ಭಾರತದಲ್ಲಿ 18,000 ಚ.ಕಿ.ಮೀ.ನಲ್ಲಿ ನೆಡುತೋಪು ನಡೆಯುತ್ತಿದೆ. ಆದರೆ ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು ಎರಡು ವರ್ಷಗಳಲ್ಲಿ ಕೇವಲ 1400 ಚ.ಕಿಮೀ  ಹೆಚ್ಚಳವಾಗಿದೆ ಎಂದು  ಕರ್ನಾಟಕ ರಾಜ್ಯದ ಅರಣ್ಯಗಳ ಮಾಜಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಬಿ.ಕೆ. ಸಿಂಗ್ ಹೇಳುತ್ತಾರೆ.

ವರದಿಯ ಪ್ರಕಾರ ಭಾರತವು ಪ್ರಧಾನವಾಗಿ ನೈಸರ್ಗಿಕ ಅರಣ್ಯವನ್ನು ಕಳೆದುಕೊಳ್ಳುತ್ತಿದೆ. ಕೃತಕ ಅಥವಾ ಮರುಸೃಷ್ಟಿಯ ಅರಣ್ಯದತ್ತ ಸಾಗುತ್ತಿದೆ ಎಂದು ದಾಖಲೆ ಹೇಳುತ್ತದೆ. ಉದಾಹರಣೆಗೆ, ಪಶ್ಚಿಮ ಘಟ್ಟಗಳು, ಹಿಮಾಲಯ ರಾಜ್ಯಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಂತಹ ಜೀವವೈವಿಧ್ಯ-ಸಮೃದ್ಧ ಪ್ರದೇಶಗಳಲ್ಲಿ ಅರಣ್ಯ ಪ್ರದೇಶವು ಕುಸಿದಿದೆ.

ವರದಿಯ ಪ್ರಕಾರ, ಕೃಷಿ ಅರಣ್ಯ ಅಥವಾ ಕೃಷಿ ಭೂಮಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮರಗಳನ್ನು ಬೆಳೆಸುವ ಅಭ್ಯಾಸವು ಕಳೆದ ದಶಕದಲ್ಲಿ 20.02% ರಷ್ಟು ಬೆಳೆದಿದೆ. ಪರಿಣಾಮವಾಗಿ ಮರಗಳ ಹೊದಿಕೆಯ ಹೆಚ್ಚಳವಾಗಿರುವುದು ಉತ್ತಮ ಸಂಕೇತವಾಗಿದೆ. ಆದ್ದರಿಂದ ನಾವು ನಮ್ಮ ಅರಣ್ಯವನ್ನು ಕಾಪಾಡಲು ಸಾಧ್ಯವಾಗುತ್ತಿಲ್ಲ, ಆದರೆ ನಾವು ಕೃಷಿ ಅರಣ್ಯವನ್ನು ಬೆಳೆಯಲು ಸಮರ್ಥರಾಗಿದ್ದೇವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗುಜರಾತ್ ರಾಜ್ಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗಣನೀಯವಾಗಿ ಭಾರತದ ಮ್ಯಾಂಗ್ರೋವ್ ಹೊದಿಕೆಯ ಇಳಿಕೆಯನ್ನು ವರದಿ ತೋರಿಸಿದೆ. ಅದೇ ಸಮಯದಲ್ಲಿ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಮ್ಯಾಂಗ್ರೋವ್ ಹೊದಿಕೆಯು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ…

56 minutes ago

ಹವಾಮಾನ ವರದಿ | 11-03-2025 | ಮೋಡದ ವಾತಾವರಣ – ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಮಾ.17 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ |

ಮಾರ್ಚ್ 17ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ…

8 hours ago

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!

ನಿಯಮಗಳು ಎಷ್ಟೇ ಇದ್ದರೂ ಹಲವು ಸಂದರ್ಭದಲ್ಲಿ ಅಭದ್ರತೆಯೂ ಅಷ್ಟೇ ಇದೆ...ಸಹಕಾರಿ ಸಂಘದಲ್ಲಿ ಇದೆಲ್ಲಾ…

15 hours ago

ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |

ಕುಂಭಮೇಳದ ಪಯಣದ ಅನುಭವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಕಳೆದ 8…

16 hours ago

3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು,…

24 hours ago