Advertisement
ಸಂಪಾದಕೀಯ ಆಯ್ಕೆ

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |

Share

ಭಾರತದ ಇತ್ತೀಚಿನ ಅರಣ್ಯ ಸಮೀಕ್ಷೆ ವರದಿಯ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ದೇಶದ ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ  ಹೆಚ್ಚಳವನ್ನು ಸೂಚಿಸಿದೆ. ಆದರೆ ತಜ್ಞರು ಹೇಳುವಂತೆ  ಜೀವವೈವಿಧ್ಯ-ಸಮೃದ್ಧ ಕಾಡುಗಳು ಮತ್ತು ಮ್ಯಾಂಗ್ರೋವ್‌ಗಳು ಮತ್ತು ಒಟ್ಟಾರೆ ಅರಣ್ಯ ಗುಣಮಟ್ಟದಲ್ಲಿ ಗಣನೀಯ ಕುಸಿತವನ್ನು ಕಂಡಿದೆ ಎಂದು ವರದಿ ಮಾಡಿದ್ದಾರೆ.…..ಮುಂದೆ ಓದಿ….

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ (ಎಫ್‌ಎಸ್‌ಐ) ಪ್ರಕಟಿಸಿದ ವರದಿಯು, 2021 ರಿಂದ ದೇಶದ ಅರಣ್ಯ ಪ್ರದೇಶವು 1,446 ಚದರ ಕಿಲೋಮೀಟರ್ ಹೆಚ್ಚಾಗಿದೆ ಎಂದು ಹೇಳಿದೆ. ಅಂದರೆ 156 ಕಿಮೀ ಅರಣ್ಯ ಹೆಚ್ಚಳವಾಗಿದೆ ಮತ್ತು ಮರದ ಹೊದಿಕೆಯು 1,289 ಕಿಮೀ ಹೆಚ್ಚಳವಾಗಿದೆ.

ಭಾರತದಲ್ಲಿ 18,000 ಚ.ಕಿ.ಮೀ.ನಲ್ಲಿ ನೆಡುತೋಪು ನಡೆಯುತ್ತಿದೆ. ಆದರೆ ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು ಎರಡು ವರ್ಷಗಳಲ್ಲಿ ಕೇವಲ 1400 ಚ.ಕಿಮೀ  ಹೆಚ್ಚಳವಾಗಿದೆ ಎಂದು  ಕರ್ನಾಟಕ ರಾಜ್ಯದ ಅರಣ್ಯಗಳ ಮಾಜಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಬಿ.ಕೆ. ಸಿಂಗ್ ಹೇಳುತ್ತಾರೆ.

ವರದಿಯ ಪ್ರಕಾರ ಭಾರತವು ಪ್ರಧಾನವಾಗಿ ನೈಸರ್ಗಿಕ ಅರಣ್ಯವನ್ನು ಕಳೆದುಕೊಳ್ಳುತ್ತಿದೆ. ಕೃತಕ ಅಥವಾ ಮರುಸೃಷ್ಟಿಯ ಅರಣ್ಯದತ್ತ ಸಾಗುತ್ತಿದೆ ಎಂದು ದಾಖಲೆ ಹೇಳುತ್ತದೆ. ಉದಾಹರಣೆಗೆ, ಪಶ್ಚಿಮ ಘಟ್ಟಗಳು, ಹಿಮಾಲಯ ರಾಜ್ಯಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಂತಹ ಜೀವವೈವಿಧ್ಯ-ಸಮೃದ್ಧ ಪ್ರದೇಶಗಳಲ್ಲಿ ಅರಣ್ಯ ಪ್ರದೇಶವು ಕುಸಿದಿದೆ.

ವರದಿಯ ಪ್ರಕಾರ, ಕೃಷಿ ಅರಣ್ಯ ಅಥವಾ ಕೃಷಿ ಭೂಮಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮರಗಳನ್ನು ಬೆಳೆಸುವ ಅಭ್ಯಾಸವು ಕಳೆದ ದಶಕದಲ್ಲಿ 20.02% ರಷ್ಟು ಬೆಳೆದಿದೆ. ಪರಿಣಾಮವಾಗಿ ಮರಗಳ ಹೊದಿಕೆಯ ಹೆಚ್ಚಳವಾಗಿರುವುದು ಉತ್ತಮ ಸಂಕೇತವಾಗಿದೆ. ಆದ್ದರಿಂದ ನಾವು ನಮ್ಮ ಅರಣ್ಯವನ್ನು ಕಾಪಾಡಲು ಸಾಧ್ಯವಾಗುತ್ತಿಲ್ಲ, ಆದರೆ ನಾವು ಕೃಷಿ ಅರಣ್ಯವನ್ನು ಬೆಳೆಯಲು ಸಮರ್ಥರಾಗಿದ್ದೇವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Advertisement

ಗುಜರಾತ್ ರಾಜ್ಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗಣನೀಯವಾಗಿ ಭಾರತದ ಮ್ಯಾಂಗ್ರೋವ್ ಹೊದಿಕೆಯ ಇಳಿಕೆಯನ್ನು ವರದಿ ತೋರಿಸಿದೆ. ಅದೇ ಸಮಯದಲ್ಲಿ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಮ್ಯಾಂಗ್ರೋವ್ ಹೊದಿಕೆಯು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

6 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

6 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

15 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

15 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

15 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

15 hours ago