Advertisement
ಸುದ್ದಿಗಳು

#NationalAnthem | ಅಮೇರಿಕಾದಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ | ರಾಷ್ಟ್ರಗೀತೆ ಹಾಡಿ ಮೋದಿ ಆಶೀರ್ವಾದ ಪಡೆದ ಅಮೆರಿಕ ಗಾಯಕಿ

Share

ಭಾರತದ ರಾಷ್ಟ್ರಗೀತೆ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಅದಕ್ಕೆ ಅದರದೇ ಆದ ಗೌರವ ಇದೆ. ನಮ್ಮ ರಾಷ್ಟ್ರಗೀತೆ ನಮ್ಮ ದೇಶದ ಅದೆಷ್ಟು ನಾಗರೀಕರಿಗೆ ಸರಿಯಾಗಿ ಹಾಡಲು ಬರುತ್ತದೋ ಇಲ್ವೋ ಗೊತ್ತಿಲ್ಲ. ಅಮೆರಿಕಾದ ಖ್ಯಾತ ಗಾಯಕಿ, ಹಾಲಿವುಡ್ ನಟಿ ಮಾತ್ರ ಎಲ್ಲರೂ ಹುಬ್ಬೇರಿಸುವಂತೆ ಹಾಡಿ ನಮ್ಮ ಪ್ರಧಾನಿ ಅವರ ಆಶೀರ್ವಾದ ಪಡೆದಿದ್ದಾರೆ.

Advertisement
Advertisement

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿ  ನೆಲೆಸಿರುವ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೊನ್ನೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಆಫ್ರಿಕನ್ ಹಾಗೂ ಅಮೆರಿಕನ್ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ #MaryMillben ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಗೀತೆಯನ್ನು ಸಹ ಅವರು ಹಾಡಿದರು. ಬಳಿಕ ಪ್ರಸಿದ್ಧ ಗಾಯಕಿ ಮೇರಿ ಮಿಲ್ಬೆನ್ (Mary Millben) ಪ್ರಧಾನಿ ನರೇಂದ್ರ ಮೋದಿಯವರ ಕಾಲುಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಒಬ್ಬ ಕರುಣೆ ಉಳ್ಳಂತಹ ವ್ಯಕ್ತಿ. ನಾನು ಅವರೊಂದಿಗೆ ಇಲ್ಲಿರುವುದು ನನಗೆ ತುಂಬಾ ಹೆಮ್ಮೆಯಾಗಿದೆ. ಇಷ್ಟೊಂದು ಜನರ ನಡುವೆ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವುದು ನನಗೆ ಖುಷಿ ನೀಡಿದೆ ಎಂದಿದ್ದಾರೆ. ಇದಕ್ಕೂ ಮೊದಲು ಗಾಯಕಿಯನ್ನು ಭಾರತದ 75 ನೇ ಸ್ವಾತಂತ್ರೋತ್ಸವದಲ್ಲಿ ಕಾರ್ಯಕ್ರಮ ಆಹ್ವಾನಿಸಲಾಗಿತ್ತು. ಈ ವೇಳೆ ಭಾರತಕ್ಕೆ ಭೇಟಿಕೊಟ್ಟಿದ್ದ ಅವರು ರಾಷ್ಟ್ರಗೀತೆಯನ್ನು ಹಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

42 minutes ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago