ಸುದ್ದಿಗಳು

ಏರಿದ ತಾಪಮಾನಕ್ಕೆ ಹೆಚ್ಚಿದ ವಿದ್ಯುತ್‌ ಬೇಡಿಕೆ | ಭಾರತದಲ್ಲಿ ವಿದ್ಯುತ್‌ ಬಳಕೆಯಲ್ಲಿ ಶೇ.13.6 ಏರಿಕೆ | ಎಪ್ರಿಲ್‌ನಲ್ಲಿ 132.98 ಶತಕೋಟಿ ಯುನಿಟ್‌ ಬೇಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ತಾಪಮಾನ ಏರಿಕೆ ಕಂಡ ಬೆನ್ನಲ್ಲೇ ವಿದ್ಯುತ್‌ ಬೇಡಿಕೆ ಹೆಚ್ಚಿದೆ. ಎಪ್ರಿಲ್‌ ತಿಂಗಳಲ್ಲಿ  13.6 ಶೇಕಡಾ ಹೆಚ್ಚುವರಿ ವಿದ್ಯುತ್‌ ಬೇಡಿಕೆ ವ್ಯಕ್ತವಾಗಿತ್ತು. ದೆಹಲಿ, ರಾಜಸ್ಥಾನ ಮೊದಲಾದ ರಾಜ್ಯದಲ್ಲಿ ವಿದ್ಯುತ್‌ ಬೇಡಿಕೆ ತೀವ್ರವಾಗಿತ್ತು. ದೇಶದಲ್ಲಿ ಏಪ್ರಿಲ್‌ನಲ್ಲಿ 132.98 ಶತಕೋಟಿ ಯೂನಿಟ್‌ ವಿದ್ಯುತ್‌ ಬೇಡಿಕೆ ವ್ಯಕ್ತವಾಗಿತ್ತು.

Advertisement
ಮಿರರ್‌ ವ್ಯೂಸ್‌ ಏನು ? ಇಲ್ಲಿ ಕ್ಲಿಕ್‌ ಮಾಡಿ ಭಾರತದಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚುತ್ತಿರುವ ನಡುವೆ ಪೂರೈಕೆಯೂ ಸವಾಲಿನ ಕೆಲಸವೇ ಆಗಿದೆ. ಭಾರತದ ತಾಪಮಾನ ವರ್ಷದಿಂದ ವರ್ಷಕ್ಕೆ ಏರುವ ಕಾರಣದಿಂದ ವಿದ್ಯುತ್‌ ಬೇಡಿಕೆಯೂ ಭವಿಷ್ಯದಲ್ಲಿ ಹೆಚ್ಚುವ ನಿರೀಕ್ಷೆ ಇದೆ. ಹೀಗಾಗಿ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಆದ್ಯತೆ ಬೇಕಾಗಿದೆ. ಈ ಕಾರಣದಿಂದ ಸೌರಶಕ್ತಿಯ ಕಡೆಗೆ ಹೆಚ್ಚಿನ ಆದ್ಯತೆ , ಗಮನವನ್ನು ಸಾಮಾನ್ಯ ಜನರೂ ನೀಡಬೇಕಾಗಿದೆ.

ದೇಶದಲ್ಲಿ ವಿದ್ಯುತ್ ಬಳಕೆಯು ಏಪ್ರಿಲ್‌ನಲ್ಲಿ 132.98 ಬಿಲಿಯನ್ ಯೂನಿಟ್‌ಗಳಿಗೆ ತಲಪಿತ್ತು. ಇದು ಶೇ 13.6 ರಷ್ಟು ಹೆಚ್ಚುವರಿ ಬೇಡಿಕೆಯಾಗಿದೆ. ಬೇಸಿಗೆಯ ಆರಂಭಿಕ  ಪರಿಣಾಮವನ್ನು ಇದು ತೋರಿಸುತ್ತದೆ ಮತ್ತು ವಿದ್ಯುತ್ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಆರ್ಥಿಕ ಚಟುವಟಿಕೆಗಳಲ್ಲಿಯೂ ಏರಿಕೆಯಾಗಿದೆ. ವಿವಿಧ ಉದ್ದಿಮೆಗಳಲ್ಲೂ ಹೆಚ್ಚುವರಿ ವಿದ್ಯುತ್‌ ಬೇಡಿಕೆ ವ್ಯಕ್ತವಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ವಿದ್ಯುತ್ ಬಳಕೆ 117.08 ಬಿಲಿಯನ್ ಯುನಿಟ್ ಬೇಡಿಕೆ ದಾಖಲಾಗಿದೆ, ಇದು 2020 ರ ಅದೇ ತಿಂಗಳಲ್ಲಿ 84.55 ಬಿಲಿಯನ್‌ ಯುನಿಟ್ ಗಿಂತ ಹೆಚ್ಚಾಗಿದೆ.

ಮತ್ತೊಂದೆಡೆ, ಗರಿಷ್ಠ ವಿದ್ಯುತ್ ಬೇಡಿಕೆಯನ್ನು ಪೂರೈಸಲಾಗಿದೆ. ಇದು ಒಂದು ದಿನದಲ್ಲಿ ಅತಿ ಹೆಚ್ಚು ಪೂರೈಕೆಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಸಾರ್ವಕಾಲಿಕ ಗರಿಷ್ಠ 207.11 GW ದಾಖಲಾಗಿದೆ. ಗರಿಷ್ಠ ವಿದ್ಯುತ್ ಪೂರೈಕೆಯು ಏಪ್ರಿಲ್ 2021 ರಲ್ಲಿ 182.37 GW ಮತ್ತು ಏಪ್ರಿಲ್ 2020 ರಲ್ಲಿ 132.73 GW ಆಗಿತ್ತು ಎಂದು ವರದಿಯಾಗಿದೆ.

ಭಾರತದ ಹವಾಮಾನದಲ್ಲಿ ಏರಿಳಿತ ಕಂಡಿದೆ. ವಿಪರೀತ ತಾಪಮಾನ ಕಂಡಿದೆ. ಹೀಗಾಗಿ ಪಶ್ಚಿಮ ಮಧ್ಯ, ವಾಯುವ್ಯ, ಉತ್ತರ ಮತ್ತು ಈಶಾನ್ಯದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಟ ತಾಪಮಾನ ಕಂಡುಬಂದ ಹಿನ್ನೆಲೆಯಲ್ಲಿ ವಿದ್ಯುತ್ ಬಳಕೆಯು ಹೆಚ್ಚಾಗುವ ನಿರೀಕ್ಷೆಯಿದೆ.

ದೆಹಲಿಯಲ್ಲಿ ಈಗಾಗಲೇ  ವಿದ್ಯುತ್ ಬೇಡಿಕೆಯು ಏಪ್ರಿಲ್‌ನಲ್ಲಿ 42% ರಷ್ಟು ಏರಿಕೆಯಾಗಿದೆ, ಉತ್ತರದ ರಾಜ್ಯಗಳಾದ ಪಂಜಾಬ್ ಮತ್ತು ರಾಜಸ್ಥಾನವು ವಿದ್ಯುತ್ ಬೇಡಿಕೆ ಕ್ರಮವಾಗಿ 36% ಮತ್ತು 28% ರಷ್ಟು ಬೇಡಿಕೆ ವ್ಯಕ್ತವಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ.

ಇಷ್ಟೆಲ್ಲಾ ವಿದ್ಯುತ್‌ ಬೇಡಿಕೆಗಳ ನಡುವೆ ಪೂರೈಕೆಯೂ ಸವಾಲಿನ ಕೆಲಸವೇ ಆಗಿದೆ. ಭಾರತದ ತಾಪಮಾನ ವರ್ಷದಿಂದ ವರ್ಷಕ್ಕೆ ಏರುವ ಕಾರಣದಿಂದ ವಿದ್ಯುತ್‌ ಬೇಡಿಕೆಯೂ ಹೆಚ್ಚುವ ನಿರೀಕ್ಷೆ ಇದೆ. ಹೀಗಾಗಿ  ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಆದ್ಯತೆ ಬೇಕಾಗಿದೆ. ಈ ಕಾರಣದಿಂದ ಸೌರಶಕ್ತಿಯ ಕಡೆಗೆ ಹೆಚ್ಚಿನ ಆದ್ಯತೆ , ಗಮನವನ್ನು ಸಾಮಾನ್ಯ ಜನರೂ ನೀಡಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

10 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

11 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

11 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

19 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago