(ಸಾಂದರ್ಭಿಕ ಚಿತ್ರ)
ಭಾರತದಲ್ಲಿ ತಾಪಮಾನ ಏರಿಕೆ ಕಂಡ ಬೆನ್ನಲ್ಲೇ ವಿದ್ಯುತ್ ಬೇಡಿಕೆ ಹೆಚ್ಚಿದೆ. ಎಪ್ರಿಲ್ ತಿಂಗಳಲ್ಲಿ 13.6 ಶೇಕಡಾ ಹೆಚ್ಚುವರಿ ವಿದ್ಯುತ್ ಬೇಡಿಕೆ ವ್ಯಕ್ತವಾಗಿತ್ತು. ದೆಹಲಿ, ರಾಜಸ್ಥಾನ ಮೊದಲಾದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ತೀವ್ರವಾಗಿತ್ತು. ದೇಶದಲ್ಲಿ ಏಪ್ರಿಲ್ನಲ್ಲಿ 132.98 ಶತಕೋಟಿ ಯೂನಿಟ್ ವಿದ್ಯುತ್ ಬೇಡಿಕೆ ವ್ಯಕ್ತವಾಗಿತ್ತು.
ದೇಶದಲ್ಲಿ ವಿದ್ಯುತ್ ಬಳಕೆಯು ಏಪ್ರಿಲ್ನಲ್ಲಿ 132.98 ಬಿಲಿಯನ್ ಯೂನಿಟ್ಗಳಿಗೆ ತಲಪಿತ್ತು. ಇದು ಶೇ 13.6 ರಷ್ಟು ಹೆಚ್ಚುವರಿ ಬೇಡಿಕೆಯಾಗಿದೆ. ಬೇಸಿಗೆಯ ಆರಂಭಿಕ ಪರಿಣಾಮವನ್ನು ಇದು ತೋರಿಸುತ್ತದೆ ಮತ್ತು ವಿದ್ಯುತ್ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಆರ್ಥಿಕ ಚಟುವಟಿಕೆಗಳಲ್ಲಿಯೂ ಏರಿಕೆಯಾಗಿದೆ. ವಿವಿಧ ಉದ್ದಿಮೆಗಳಲ್ಲೂ ಹೆಚ್ಚುವರಿ ವಿದ್ಯುತ್ ಬೇಡಿಕೆ ವ್ಯಕ್ತವಾಗಿದೆ. ಕಳೆದ ವರ್ಷ ಏಪ್ರಿಲ್ನಲ್ಲಿ ವಿದ್ಯುತ್ ಬಳಕೆ 117.08 ಬಿಲಿಯನ್ ಯುನಿಟ್ ಬೇಡಿಕೆ ದಾಖಲಾಗಿದೆ, ಇದು 2020 ರ ಅದೇ ತಿಂಗಳಲ್ಲಿ 84.55 ಬಿಲಿಯನ್ ಯುನಿಟ್ ಗಿಂತ ಹೆಚ್ಚಾಗಿದೆ.
ಮತ್ತೊಂದೆಡೆ, ಗರಿಷ್ಠ ವಿದ್ಯುತ್ ಬೇಡಿಕೆಯನ್ನು ಪೂರೈಸಲಾಗಿದೆ. ಇದು ಒಂದು ದಿನದಲ್ಲಿ ಅತಿ ಹೆಚ್ಚು ಪೂರೈಕೆಯಾಗಿದೆ. ಈ ವರ್ಷದ ಏಪ್ರಿಲ್ನಲ್ಲಿ ಸಾರ್ವಕಾಲಿಕ ಗರಿಷ್ಠ 207.11 GW ದಾಖಲಾಗಿದೆ. ಗರಿಷ್ಠ ವಿದ್ಯುತ್ ಪೂರೈಕೆಯು ಏಪ್ರಿಲ್ 2021 ರಲ್ಲಿ 182.37 GW ಮತ್ತು ಏಪ್ರಿಲ್ 2020 ರಲ್ಲಿ 132.73 GW ಆಗಿತ್ತು ಎಂದು ವರದಿಯಾಗಿದೆ.
ಭಾರತದ ಹವಾಮಾನದಲ್ಲಿ ಏರಿಳಿತ ಕಂಡಿದೆ. ವಿಪರೀತ ತಾಪಮಾನ ಕಂಡಿದೆ. ಹೀಗಾಗಿ ಪಶ್ಚಿಮ ಮಧ್ಯ, ವಾಯುವ್ಯ, ಉತ್ತರ ಮತ್ತು ಈಶಾನ್ಯದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಟ ತಾಪಮಾನ ಕಂಡುಬಂದ ಹಿನ್ನೆಲೆಯಲ್ಲಿ ವಿದ್ಯುತ್ ಬಳಕೆಯು ಹೆಚ್ಚಾಗುವ ನಿರೀಕ್ಷೆಯಿದೆ.
ದೆಹಲಿಯಲ್ಲಿ ಈಗಾಗಲೇ ವಿದ್ಯುತ್ ಬೇಡಿಕೆಯು ಏಪ್ರಿಲ್ನಲ್ಲಿ 42% ರಷ್ಟು ಏರಿಕೆಯಾಗಿದೆ, ಉತ್ತರದ ರಾಜ್ಯಗಳಾದ ಪಂಜಾಬ್ ಮತ್ತು ರಾಜಸ್ಥಾನವು ವಿದ್ಯುತ್ ಬೇಡಿಕೆ ಕ್ರಮವಾಗಿ 36% ಮತ್ತು 28% ರಷ್ಟು ಬೇಡಿಕೆ ವ್ಯಕ್ತವಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ.
ಇಷ್ಟೆಲ್ಲಾ ವಿದ್ಯುತ್ ಬೇಡಿಕೆಗಳ ನಡುವೆ ಪೂರೈಕೆಯೂ ಸವಾಲಿನ ಕೆಲಸವೇ ಆಗಿದೆ. ಭಾರತದ ತಾಪಮಾನ ವರ್ಷದಿಂದ ವರ್ಷಕ್ಕೆ ಏರುವ ಕಾರಣದಿಂದ ವಿದ್ಯುತ್ ಬೇಡಿಕೆಯೂ ಹೆಚ್ಚುವ ನಿರೀಕ್ಷೆ ಇದೆ. ಹೀಗಾಗಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ಬೇಕಾಗಿದೆ. ಈ ಕಾರಣದಿಂದ ಸೌರಶಕ್ತಿಯ ಕಡೆಗೆ ಹೆಚ್ಚಿನ ಆದ್ಯತೆ , ಗಮನವನ್ನು ಸಾಮಾನ್ಯ ಜನರೂ ನೀಡಬಹುದಾಗಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…