ಮಾಹಿತಿ

ಭಾರತದ ಶಕ್ತಿ, ಸಾಮರ್ಥ್ಯ ‘ಚಿನ್ನದ ಗಣಿ’ ಗಿಂತ ಜಾಸ್ತಿ | ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವು “ಚಿನ್ನದ ಗಣಿ” ಗಿಂತ ಕಡಿಮೆಯೇನಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ಸಂದರ್ಭ ಅವರು ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು  ಉದ್ಯಮಿಗಳನ್ನು ಆಹ್ವಾನಿಸಿದ್ದಾರೆ.

Advertisement

ಹಸಿರು ಬೆಳವಣಿಗೆಯ ಕುರಿತು 2023-24ರ ಕೇಂದ್ರ ಬಜೆಟ್‌ ಅನೇಕ ಘೋಷಣೆಗಳನ್ನು ಮಾಡಲಾಗಿತ್ತು. ಈ ಕುರಿತು ಬಜೆಟ್ ನಂತರದ ವೆಬ್‌ನಾರ್‌ನಲ್ಲಿ ಮೋದಿ ಅವರು ಪ್ರಮುಖ ಕೈಗಾರಿಕೋದ್ಯಮಿಗಳು, ತಜ್ಞರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಉದ್ದೇಶಿಸಿ ಮಾತನಾಡುತ್ತಿದ್ದರು. “ಭಾರತವು ಹಸಿರು ಇಂಧನ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ನಾನು ಭಾರತದಲ್ಲಿ ಹೂಡಿಕೆ ಮಾಡಲು ಎಲ್ಲಾ ಪಾಲುದಾರರನ್ನು ಆಹ್ವಾನಿಸುತ್ತೇನೆ ಎಂದು ಕರೆ ನೀಡಿದರು.

ಭಾರತದಲ್ಲಿ ಸೌರಶಕ್ತಿ, ಪವನ ಶಕ್ತಿ ಮತ್ತು ಜೈವಿಕ ಅನಿಲದಂತಹ ನವೀಕರಿಸಬಹುದಾದ ಶಕ್ತಿಯ ಸಾಮರ್ಥ್ಯವು ಅಗಾಧವಾದುದ್ದು. ಸರ್ಕಾರವು ಜೈವಿಕ ಇಂಧನದ ಮೇಲೆ ಹೆಚ್ಚು ಗಮನಹರಿಸಿದೆ ಮತ್ತು ಇದು ಹೂಡಿಕೆದಾರರಿಗೆ ಸಾಕಷ್ಟು ಅವಕಾಶವನ್ನು ತರುತ್ತದೆ ಎಂದು ಹೇಳಿದರು.

ನಿಗದಿತ ಸಮಯಕ್ಕಿಂತ ಐದು ತಿಂಗಳ ಮುಂಚಿತವಾಗಿ ಭಾರತವು ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುತ್ತದೆ ಎಂದವರು ಉಲ್ಲೇಖಿಸಿದರು. ನಿಗದಿತ ಅವಧಿಗಿಂತ ಒಂಬತ್ತು ವರ್ಷಗಳ ಮುಂಚಿತವಾಗಿ 40 ಪ್ರತಿಶತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಗುರಿಯನ್ನು ತಲುಪುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Advertisement

2014 ರಿಂದ ಬಜೆಟ್‌ಗಳು ಪ್ರಸ್ತುತ ಸವಾಲುಗಳನ್ನು ಮಾತ್ರ ಪರಿಹರಿಸಿಲ್ಲ. ಹೊಸ ಯುಗದ ಸುಧಾರಣೆಗಳನ್ನು ಹೆಚ್ಚಿಸಿವೆ ಎಂದು ಹೇಳಿದರು. ಭಾರತವು ವಾರ್ಷಿಕವಾಗಿ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆಯ ಗುರಿಯನ್ನು ಹೊಂದಿದೆ. ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಅಡಿಯಲ್ಲಿ ಖಾಸಗಿ ವಲಯಕ್ಕೆ 19 ಸಾವಿರ ಕೋಟಿ ಪ್ರೋತ್ಸಾಹವನ್ನು ನೀಡುತ್ತದೆ. ವಾಹನ ಸ್ಕ್ರ್ಯಾಪಿಂಗ್‌ಗೆ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡುವ ಬಗ್ಗೆ ಮಾತನಾಡಿದ ಅವರು, 15 ವರ್ಷಕ್ಕಿಂತ ಹಳೆಯದಾದ ಸುಮಾರು 3 ಲಕ್ಷ ಸರ್ಕಾರಿ ವಾಹನಗಳನ್ನು ರದ್ದುಗೊಳಿಸಲಾಗುವುದು.

Advertisement

ಭಾರತವು ಬ್ಯಾಟರಿ ಶೇಖರಣಾ ಸಾಮರ್ಥ್ಯವನ್ನು ಗಂಟೆಗೆ 125 ಗಿಗಾವ್ಯಾಟ್‌ಗಳಿಗೆ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಶಕ್ತಿಯನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

4 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

10 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

10 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

11 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

21 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago