Advertisement
ಮಾಹಿತಿ

ಭಾರತದ ಶಕ್ತಿ, ಸಾಮರ್ಥ್ಯ ‘ಚಿನ್ನದ ಗಣಿ’ ಗಿಂತ ಜಾಸ್ತಿ | ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

Share

ಭಾರತದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವು “ಚಿನ್ನದ ಗಣಿ” ಗಿಂತ ಕಡಿಮೆಯೇನಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ಸಂದರ್ಭ ಅವರು ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು  ಉದ್ಯಮಿಗಳನ್ನು ಆಹ್ವಾನಿಸಿದ್ದಾರೆ.

Advertisement
Advertisement

ಹಸಿರು ಬೆಳವಣಿಗೆಯ ಕುರಿತು 2023-24ರ ಕೇಂದ್ರ ಬಜೆಟ್‌ ಅನೇಕ ಘೋಷಣೆಗಳನ್ನು ಮಾಡಲಾಗಿತ್ತು. ಈ ಕುರಿತು ಬಜೆಟ್ ನಂತರದ ವೆಬ್‌ನಾರ್‌ನಲ್ಲಿ ಮೋದಿ ಅವರು ಪ್ರಮುಖ ಕೈಗಾರಿಕೋದ್ಯಮಿಗಳು, ತಜ್ಞರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಉದ್ದೇಶಿಸಿ ಮಾತನಾಡುತ್ತಿದ್ದರು. “ಭಾರತವು ಹಸಿರು ಇಂಧನ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ನಾನು ಭಾರತದಲ್ಲಿ ಹೂಡಿಕೆ ಮಾಡಲು ಎಲ್ಲಾ ಪಾಲುದಾರರನ್ನು ಆಹ್ವಾನಿಸುತ್ತೇನೆ ಎಂದು ಕರೆ ನೀಡಿದರು.

Advertisement

ಭಾರತದಲ್ಲಿ ಸೌರಶಕ್ತಿ, ಪವನ ಶಕ್ತಿ ಮತ್ತು ಜೈವಿಕ ಅನಿಲದಂತಹ ನವೀಕರಿಸಬಹುದಾದ ಶಕ್ತಿಯ ಸಾಮರ್ಥ್ಯವು ಅಗಾಧವಾದುದ್ದು. ಸರ್ಕಾರವು ಜೈವಿಕ ಇಂಧನದ ಮೇಲೆ ಹೆಚ್ಚು ಗಮನಹರಿಸಿದೆ ಮತ್ತು ಇದು ಹೂಡಿಕೆದಾರರಿಗೆ ಸಾಕಷ್ಟು ಅವಕಾಶವನ್ನು ತರುತ್ತದೆ ಎಂದು ಹೇಳಿದರು.

ನಿಗದಿತ ಸಮಯಕ್ಕಿಂತ ಐದು ತಿಂಗಳ ಮುಂಚಿತವಾಗಿ ಭಾರತವು ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುತ್ತದೆ ಎಂದವರು ಉಲ್ಲೇಖಿಸಿದರು. ನಿಗದಿತ ಅವಧಿಗಿಂತ ಒಂಬತ್ತು ವರ್ಷಗಳ ಮುಂಚಿತವಾಗಿ 40 ಪ್ರತಿಶತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಗುರಿಯನ್ನು ತಲುಪುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Advertisement

2014 ರಿಂದ ಬಜೆಟ್‌ಗಳು ಪ್ರಸ್ತುತ ಸವಾಲುಗಳನ್ನು ಮಾತ್ರ ಪರಿಹರಿಸಿಲ್ಲ. ಹೊಸ ಯುಗದ ಸುಧಾರಣೆಗಳನ್ನು ಹೆಚ್ಚಿಸಿವೆ ಎಂದು ಹೇಳಿದರು. ಭಾರತವು ವಾರ್ಷಿಕವಾಗಿ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆಯ ಗುರಿಯನ್ನು ಹೊಂದಿದೆ. ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಅಡಿಯಲ್ಲಿ ಖಾಸಗಿ ವಲಯಕ್ಕೆ 19 ಸಾವಿರ ಕೋಟಿ ಪ್ರೋತ್ಸಾಹವನ್ನು ನೀಡುತ್ತದೆ. ವಾಹನ ಸ್ಕ್ರ್ಯಾಪಿಂಗ್‌ಗೆ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡುವ ಬಗ್ಗೆ ಮಾತನಾಡಿದ ಅವರು, 15 ವರ್ಷಕ್ಕಿಂತ ಹಳೆಯದಾದ ಸುಮಾರು 3 ಲಕ್ಷ ಸರ್ಕಾರಿ ವಾಹನಗಳನ್ನು ರದ್ದುಗೊಳಿಸಲಾಗುವುದು.

ಭಾರತವು ಬ್ಯಾಟರಿ ಶೇಖರಣಾ ಸಾಮರ್ಥ್ಯವನ್ನು ಗಂಟೆಗೆ 125 ಗಿಗಾವ್ಯಾಟ್‌ಗಳಿಗೆ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಶಕ್ತಿಯನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

3 hours ago

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

11 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

16 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

16 hours ago