Advertisement
ಮಾಹಿತಿ

ಭಾರತದ ಶಕ್ತಿ, ಸಾಮರ್ಥ್ಯ ‘ಚಿನ್ನದ ಗಣಿ’ ಗಿಂತ ಜಾಸ್ತಿ | ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

Share

ಭಾರತದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವು “ಚಿನ್ನದ ಗಣಿ” ಗಿಂತ ಕಡಿಮೆಯೇನಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ಸಂದರ್ಭ ಅವರು ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು  ಉದ್ಯಮಿಗಳನ್ನು ಆಹ್ವಾನಿಸಿದ್ದಾರೆ.

ಹಸಿರು ಬೆಳವಣಿಗೆಯ ಕುರಿತು 2023-24ರ ಕೇಂದ್ರ ಬಜೆಟ್‌ ಅನೇಕ ಘೋಷಣೆಗಳನ್ನು ಮಾಡಲಾಗಿತ್ತು. ಈ ಕುರಿತು ಬಜೆಟ್ ನಂತರದ ವೆಬ್‌ನಾರ್‌ನಲ್ಲಿ ಮೋದಿ ಅವರು ಪ್ರಮುಖ ಕೈಗಾರಿಕೋದ್ಯಮಿಗಳು, ತಜ್ಞರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಉದ್ದೇಶಿಸಿ ಮಾತನಾಡುತ್ತಿದ್ದರು. “ಭಾರತವು ಹಸಿರು ಇಂಧನ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ನಾನು ಭಾರತದಲ್ಲಿ ಹೂಡಿಕೆ ಮಾಡಲು ಎಲ್ಲಾ ಪಾಲುದಾರರನ್ನು ಆಹ್ವಾನಿಸುತ್ತೇನೆ ಎಂದು ಕರೆ ನೀಡಿದರು.

ಭಾರತದಲ್ಲಿ ಸೌರಶಕ್ತಿ, ಪವನ ಶಕ್ತಿ ಮತ್ತು ಜೈವಿಕ ಅನಿಲದಂತಹ ನವೀಕರಿಸಬಹುದಾದ ಶಕ್ತಿಯ ಸಾಮರ್ಥ್ಯವು ಅಗಾಧವಾದುದ್ದು. ಸರ್ಕಾರವು ಜೈವಿಕ ಇಂಧನದ ಮೇಲೆ ಹೆಚ್ಚು ಗಮನಹರಿಸಿದೆ ಮತ್ತು ಇದು ಹೂಡಿಕೆದಾರರಿಗೆ ಸಾಕಷ್ಟು ಅವಕಾಶವನ್ನು ತರುತ್ತದೆ ಎಂದು ಹೇಳಿದರು.

ನಿಗದಿತ ಸಮಯಕ್ಕಿಂತ ಐದು ತಿಂಗಳ ಮುಂಚಿತವಾಗಿ ಭಾರತವು ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುತ್ತದೆ ಎಂದವರು ಉಲ್ಲೇಖಿಸಿದರು. ನಿಗದಿತ ಅವಧಿಗಿಂತ ಒಂಬತ್ತು ವರ್ಷಗಳ ಮುಂಚಿತವಾಗಿ 40 ಪ್ರತಿಶತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಗುರಿಯನ್ನು ತಲುಪುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

2014 ರಿಂದ ಬಜೆಟ್‌ಗಳು ಪ್ರಸ್ತುತ ಸವಾಲುಗಳನ್ನು ಮಾತ್ರ ಪರಿಹರಿಸಿಲ್ಲ. ಹೊಸ ಯುಗದ ಸುಧಾರಣೆಗಳನ್ನು ಹೆಚ್ಚಿಸಿವೆ ಎಂದು ಹೇಳಿದರು. ಭಾರತವು ವಾರ್ಷಿಕವಾಗಿ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆಯ ಗುರಿಯನ್ನು ಹೊಂದಿದೆ. ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಅಡಿಯಲ್ಲಿ ಖಾಸಗಿ ವಲಯಕ್ಕೆ 19 ಸಾವಿರ ಕೋಟಿ ಪ್ರೋತ್ಸಾಹವನ್ನು ನೀಡುತ್ತದೆ. ವಾಹನ ಸ್ಕ್ರ್ಯಾಪಿಂಗ್‌ಗೆ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡುವ ಬಗ್ಗೆ ಮಾತನಾಡಿದ ಅವರು, 15 ವರ್ಷಕ್ಕಿಂತ ಹಳೆಯದಾದ ಸುಮಾರು 3 ಲಕ್ಷ ಸರ್ಕಾರಿ ವಾಹನಗಳನ್ನು ರದ್ದುಗೊಳಿಸಲಾಗುವುದು.

ಭಾರತವು ಬ್ಯಾಟರಿ ಶೇಖರಣಾ ಸಾಮರ್ಥ್ಯವನ್ನು ಗಂಟೆಗೆ 125 ಗಿಗಾವ್ಯಾಟ್‌ಗಳಿಗೆ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಶಕ್ತಿಯನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

3 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

3 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

4 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

4 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

15 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

19 hours ago