ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ

November 15, 2024
11:24 PM

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ  ಕೃಷಿ ಉದ್ಯಮ ಸೇರಿದಂತೆ  ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ.  ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್‌ಗಳಿಂದ  2022-23 ರಲ್ಲಿ 500 ಕೋಟಿ ಲೀಟರ್‌ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್‌ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ,  ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ  ವಿದೇಶಿ ವಿನಿಮಯದ ಉಳಿತಾಯವಾಗಿದೆ.  544 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror