ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ ಕೃಷಿ ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ. ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್ಗಳಿಂದ 2022-23 ರಲ್ಲಿ 500 ಕೋಟಿ ಲೀಟರ್ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ, ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ ವಿದೇಶಿ ವಿನಿಮಯದ ಉಳಿತಾಯವಾಗಿದೆ. 544 ಲಕ್ಷ ಮೆಟ್ರಿಕ್ ಟನ್ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…