ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ ಕೃಷಿ ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ. ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್ಗಳಿಂದ 2022-23 ರಲ್ಲಿ 500 ಕೋಟಿ ಲೀಟರ್ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ, ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ ವಿದೇಶಿ ವಿನಿಮಯದ ಉಳಿತಾಯವಾಗಿದೆ. 544 ಲಕ್ಷ ಮೆಟ್ರಿಕ್ ಟನ್ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…