ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಭಾರತೀಯ ಕೈಗಾರಿಕೆಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿ ನಡೆದ ಬಯೋಎನರ್ಜಿ ಶೃಂಗಸಭೆಯ 12 ನೇ ಆವೃತ್ತಿಯಲ್ಲಿ ಅವರು ಮಾತನಾಡಿದರು. ಎಥೆನಾಲ್ ಮಿಶ್ರಣ ನೀತಿಯಿಂದ ಕೃಷಿ ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯಾಗಿದೆ. ಎಥೆನಾಲ್ ಮಿಶ್ರಣ ಕಾರ್ಯಕ್ರಮದ ಅಡಿಯಲ್ಲಿ 2013-14 ರಲ್ಲಿ 38 ಕೋಟಿ ಲೀಟರ್ಗಳಿಂದ 2022-23 ರಲ್ಲಿ 500 ಕೋಟಿ ಲೀಟರ್ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎಥೆಲಾನ್ ಯೋಜನೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ, ಒಂದು ಲಕ್ಷದ 6 ಸಾವಿರದ 72 ಕೋಟಿ ರೂಪಾಯಿ ವಿದೇಶಿ ವಿನಿಮಯದ ಉಳಿತಾಯವಾಗಿದೆ. 544 ಲಕ್ಷ ಮೆಟ್ರಿಕ್ ಟನ್ಗಳಷ್ಟು ಇಂಗಾಲದ ಹೊರಸೂಸುವಿಕೆಯನ್ನು ಇದು ಕಡಿಮೆ ಮಾಡಿದೆ ಮತ್ತು 181 ಲಕ್ಷ ಮೆಟ್ರಿಕ್ ಟನ್ಗಳಷ್ಟು ಕಚ್ಚಾ ತೈಲ ಪರ್ಯಾಯವನ್ನು ಸಾಧಿಸಿದೆ. ಇಷ್ಟೇ ಅಲ್ಲದೇ, ರೈತರಿಗೆ 90 ಸಾವಿರದ 59 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…