Advertisement
MIRROR FOCUS

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

Share

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ 300 ರಿಂದ 400 ಡ್ರೋನ್‌ಗಳನ್ನು ಭಾರತ ಹೊಡೆದುರುಳಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ  ದೆಹಲಿಯಲ್ಲಿ ತಿಳಿಸಿದ್ದಾರೆ.

Advertisement

ಆಪರೇಷನ್ ಸಿಂಧೂರ್ ಕುರಿತು  ಮಾಹಿತಿ ನೀಡುವ ವಿಶೇಷ ಸುದ್ದಿಗೋಷ್ಠಿಯಲ್ಲಿ ಅವರು, ಭಾರತದ  ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದನ್ನು ನಿರಾಕರಿಸಿರುವ ಪಾಕಿಸ್ತಾನದ  ಹೇಳಿಕೆ ಸತ್ಯಕ್ಕೆ ದೂರವಾಗಿದೆ. ದೇವಾಲಯ, ಚರ್ಚ್‌ ಮತ್ತು ಗುರುದ್ವಾರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುವುದನ್ನು ಮುಂದುವರೆಸಿದೆ. ಪುಂಛ್‌ನಲ್ಲಿರುವ ಗುರುದ್ವಾರದ ಮೇಲೆ  ದಾಳಿ ನಡೆಸಿದ್ದು,  ಇದರಿಂದ ಸಿಖ್‌ ಸಮುದಾಯದ ಜನರು ಸೇರಿದಂತೆ ಕೆಲವರು ಮೃತಪಟ್ಟಿದ್ದಾರೆ ಎಂದು ಹೇಳಿದರು. ಪಾಕಿಸ್ತಾನವು  ಗಡಿ ಪ್ರದೇಶ ಶಾಲೆಯೊಂದರ ಮೇಲೆ ಶೆಲ್ಲಿಂಗ್‌ ದಾಳಿ ನಡೆಸಿದ್ದು,  ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಪಾಲಕರಿಗೆ ಮತ್ತು ಶಾಲಾ ಸಿಬ್ಬಂದಿಗೆ ಗಾಯಗಳಾಗಿವೆ. ಭಾರತದ ಕಡೆಯಿಂದ  ಅಲ್ಲಿನ ಧಾರ್ಮಿಕ ನೆಲೆಗಳ ಮೇಲೆ ದಾಳಿಯಾಗಿದೆ ಎಂಬ ಪಾಕಿಸ್ತಾನದ ಹೇಳಿಕೆ   ಪ್ರಚೋದನಾಕಾರಿಯಾಗಿದ್ದು, ಸುಳ್ಳಿನಿಂದ ಕೂಡಿದೆ. ಭಾರತದ ಒಗ್ಗಟ್ಟು ಪಾಕಿಸ್ತಾನಕ್ಕೆ ಸವಾಲಾಗಿ ಪರಿಣಮಿಸಿದೆ. ಭಾರತಕ್ಕೆ ಈಗಾಗಲೇ ಅಮೆರಿಕ, ರಷ್ಯಾ ಸೇರಿದಂತೆ  ಜಗತ್ತಿನ  ಹಲವು ರಾಷ್ಟ್ರಗಳು ಬೆಂಬಲ ಸೂಚಿಸಿವೆ ಎಂದರು.

ಸಿಂಧು ನದಿ ನೀರು ಒಪ್ಪಂದದ ಬಗ್ಗೆ ಮಾತನಾಡಿದ ವಿಕ್ರಮ್‌ ಮಿಸ್ತ್ರಿ, ಪಾಕಿಸ್ತಾನ ಪದೇ ಪದೇ ಭಯೋತ್ಪಾದನಾ ಕೃತ್ಯ ನಡೆಸುತ್ತಿದ್ದರೂ ಇಷ್ಟು ಸುದೀರ್ಘ ಅವಧಿಯವರೆಗೆ ಭಾರತ ಅದನ್ನು ಸಹಿಸಿಕೊಂಡು ಬಂದಿದೆ. ಆದರೆ ಈ ಒಪ್ಪಂದವು 50-60 ವರ್ಷಗಳಷ್ಟು ಹಳೆಯದ್ದಾಗಿದ್ದು, ಅದರಲ್ಲಿ ಕೆಲವೊಂದು ಬದಲಾವಣೆಗಳ ಅಗತ್ಯವಿತ್ತು. ತಂತ್ರಜ್ಞಾನ ಸೇರಿದಂತೆ ಹಲವು ಬದಲಾವಣೆಗೆ ಪಾಕಿಸ್ತಾನ ಒಪ್ಪಿಕೊಂಡಿರಲಿಲ್ಲ. ಭಾರತದ ಮನವಿಗೆ ಅದು ಸ್ಪಂದಿಸಲಿಲ್ಲ ಎಂದು ಹೇಳಿದರು.

ಆಪರೇಷನ್‌ ಸಿಂಧೂರ ಕುರಿತು  ಕರ್ನಲ್‌ ಸೋಫಿಯಾ ಖುರೇಷಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮಿಕಾ ಸಿಂಗ್‌ ಮಾಹಿತಿ ನೀಡಿ,  ನಿನ್ನೆ ರಾತ್ರಿ ಪಾಕಿಸ್ತಾನ ಪೂರ್ವ ಮತ್ತು ಪಶ್ಚಿಮ ಗಡಿ ನಿಯಂತ್ರಣ ರೇಖೆಯ ಬಳಿ ನಡೆಸಿದ್ದ ದಾಳಿಯಲ್ಲಿ  ಭಾರತದ ಕೆಲವು ಯೋಧರು ಹುತಾತ್ಮರಾಗಿದ್ದಾರೆ ಎಂದು  ತಿಳಿಸಿದರು.  ಭಾರತವು ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ. ಅದರ ಹಲವು ಕ್ಷಿಪಣಿಗಳನ್ನು ಧ್ವಂಸ ಮಾಡಲಾಗಿದೆ.  ಪಾಕಿಸ್ತಾನದ ಕಡೆಯಿಂದ ಬರುವ ಡ್ರೋನ್‌ಗಳನ್ನು ತಟಸ್ಥಗೊಳಿಸಲಾಗಿದೆ.  ಪಾಕಿಸ್ತಾನ ದಾಳಿ ನಡೆಸಿದ್ದ  ಡ್ರೋನ್‌ ಬಗ್ಗೆ ಪರಿಶೀಲಿಸಲಾಗಿದ್ದು, ಇದು ಟರ್ಕಿಯಿಂದ ಬಂದಿರುವುದು ಎಂದು ತಿಳಿದುಬಂದಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

33 minutes ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

37 minutes ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

44 minutes ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

47 minutes ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

10 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago