Advertisement
ವಿಶೇಷ ವರದಿಗಳು

ಮಣ್ಣಿನ ಆರೋಗ್ಯ ಕುಸಿತ : ಭಾರತದ ಕೃಷಿಗೆ ಗಂಭೀರ ಎಚ್ಚರಿಕೆ

Share

ಭಾರತದ ಮಣ್ಣಿನ ಆರೋಗ್ಯ ಗಂಭೀರ ಕುಸಿತದ ಹಂತಕ್ಕೆ ತಲುಪುತ್ತಿದ್ದು, ಇದು ಕೃಷಿ ಉತ್ಪಾದನೆ ಮಾತ್ರವಲ್ಲದೆ ದೇಶದ ಆಹಾರ ಭದ್ರತೆಯ ಮೇಲೂ ಎಚ್ಚರಿಕೆಯ ಸಂಕೇತವಾಗಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ, ಏಕಬೆಳೆ ಕೃಷಿ ಮತ್ತು ಜೈವಿಕ ಪೋಷಕಾಂಶಗಳ ನಿರ್ಲಕ್ಷ್ಯದಿಂದ ಮಣ್ಣಿನ ಫಲವತ್ತತೆ ದಿನೇದಿನೇ ಕುಗ್ಗುತ್ತಿದೆ ಎಂದು  ಜಿಕೆ ಟುಡೇ ಪ್ರಕಟಿಸಿದ ವಿಶ್ಲೇಷಣೆ ಎಚ್ಚರಿಸಿದೆ.

ವಿಶ್ಲೇಷಣೆ ಪ್ರಕಾರ, ಭಾರತದ ಬಹುತೇಕ ಕೃಷಿಭೂಮಿಗಳು ನೈಟ್ರೋಜನ್–ಫಾಸ್ಫರಸ್–ಪೊಟಾಶ್ (NPK) ಮೇಲಿನ ಅತಿಯಾದ ಅವಲಂಬನೆಯಿಂದ ಸೂಕ್ಷ್ಮ ಪೋಷಕಾಂಶಗಳಾದ ಜಿಂಕ್, ಸಲ್ಫರ್, ಬೋರಾನ್ ಮುಂತಾದವುಗಳ ಕೊರತೆಯನ್ನು ಎದುರಿಸುತ್ತಿವೆ. ಇದರ ಪರಿಣಾಮವಾಗಿ ಮಣ್ಣಿನ ಜೀವಂತಿಕೆ, ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಹಾಗೂ ಬೆಳೆಗಳ ರೋಗ ನಿರೋಧಕ ಸಾಮರ್ಥ್ಯ ಕುಂಠಿತವಾಗುತ್ತಿದೆ.

ಸಮಗ್ರ ಪೋಷಕಾಂಶ ನಿರ್ವಹಣೆ (INM) ಏನು? :  ಈ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರವಾಗಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ( Integrated Nutrient Management (INM)) ಪದ್ಧತಿಯನ್ನು ಲೇಖನ ಮುಂದಿಟ್ಟಿದೆ. ಸಮಗ್ರ ಪೋಷಕಾಂಶಗಳ ನಿರ್ವಹಣೆ ಅಂದರೆ ರಾಸಾಯನಿಕ ಗೊಬ್ಬರಗಳನ್ನು ಸಂಪೂರ್ಣವಾಗಿ ತ್ಯಜಿಸುವುದಲ್ಲ; ಅವುಗಳನ್ನು ಜೈವಿಕ ಗೊಬ್ಬರಗಳು, ಬಯೋ–ಫರ್ಟಿಲೈಸರ್‌ಗಳು ಮತ್ತು ಬೆಳೆ ಅವಶೇಷಗಳೊಂದಿಗೆ ಸಮತೋಲನದಲ್ಲಿ ಬಳಸುವುದು.

ಸಮಗ್ರ ಪೋಷಕಾಂಶಗಳ ನಿರ್ವಹಣೆ ಪ್ರಮುಖ ಅಂಶಗಳು: ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ಬಳಕೆ, ಹಸುಗೊಬ್ಬರ, ಕಂಪೋಸ್ಟ್, ವರ್ಮಿಕಂಪೋಸ್ಟ್ ಬಳಕೆ, ಬಯೋ–ಫರ್ಟಿಲೈಸರ್‌ಗಳ ಬಳಕೆ,  ಬೆಳೆ ಅವಶೇಷಗಳ ಮಣ್ಣಿಗೆ ಮರಳಿಸುವಿಕೆ. ಈ ವಿಧಾನ ಮಣ್ಣಿನ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಗಳನ್ನು ಪುನಶ್ಚೇತನಗೊಳಿಸುತ್ತದೆ.

ರೈತರಿಗೆ ಲಾಭವೇನು? : ಸಮಗ್ರ ಪೋಷಕಾಂಶಗಳ ನಿರ್ವಹಣೆ ರೈತರಿಗೆ ಗೊಬ್ಬರ ವೆಚ್ಚದಲ್ಲಿ ಉಳಿತಾಯ, ದೀರ್ಘಕಾಲಿಕ ಮಣ್ಣಿನ ಫಲವತ್ತತೆ, ನೀರಿನ ಉತ್ತಮ ಬಳಕೆ, ಬೆಳೆ ಗುಣಮಟ್ಟ ಹಾಗೂ ಇಳುವರಿ ಸ್ಥಿರತೆ , ವಿಶೇಷವಾಗಿ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸುತ್ತಿರುವ ಸಣ್ಣ ಹಾಗೂ ಮಧ್ಯಮ ರೈತರಿಗೆ ಸಮಗ್ರ ಪೋಷಕಾಂಶಗಳ ನಿರ್ವಹಣೆ ಅತ್ಯಂತ ಸಹಾಯಕವಾಗಬಹುದು ಎಂದು ಲೇಖನ ತಿಳಿಸಿದೆ.

ರಾಷ್ಟ್ರೀಯ ಮಟ್ಟದ ಮಹತ್ವ : ಸಮಗ್ರ ಪೋಷಕಾಂಶಗಳ ನಿರ್ವಹಣೆ ಪದ್ಧತಿ ಮಣ್ಣು ಮಾತ್ರವಲ್ಲದೆ, ನೀರು ಮತ್ತು ಪರಿಸರ ಮಾಲಿನ್ಯವನ್ನು ತಗ್ಗಿಸುವಲ್ಲಿ ಸಹಕಾರಿ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಉಂಟಾಗುವ ಜಲಮಾಲಿನ್ಯ ಮತ್ತು ಹಸಿರುಮನೆ ಅನಿಲಗಳ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಈ ಪದ್ಧತಿ ಪ್ರಮುಖ ಪಾತ್ರ ವಹಿಸುತ್ತದೆ.

ಭಾರತದ ಮಣ್ಣು ಈಗ ಸ್ಪಷ್ಟ ಸಂದೇಶ ನೀಡುತ್ತಿದೆ  “ಸಮತೋಲನ ಇಲ್ಲದ ಕೃಷಿ ದೀರ್ಘಕಾಲ ಉಳಿಯದು”. ಸಮಗ್ರ ಪೋಷಕಾಂಶಗಳ ನಿರ್ವಹಣೆಯೇ ಮಣ್ಣಿನ ಆರೋಗ್ಯ, ರೈತರ ಆದಾಯ ಮತ್ತು ದೇಶದ ಆಹಾರ ಭದ್ರತೆಯನ್ನು ಕಾಪಾಡುವ ಮುಂದಿನ ದಾರಿ ಎಂಬುದು ಈ ವಿಶ್ಲೇಷಣೆಯಲ್ಲಿ ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

2 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

7 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago