ಸುದ್ದಿಗಳು

ದೇಶದಲ್ಲಿ ಇದೆ 3167 ಹುಲಿಗಳು | ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ‌ : ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ಈಗ 3,167 ಹುಲಿಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮೈಸೂರಿನ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಆಯೋಜನೆಗೊಂಡ ಹುಲಿ ಯೋಜನೆಯ ಸುವರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ನರೇಂದ್ರ ಮೋದಿ 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದರು.

Advertisement
Advertisement

ಈ ವೇಳೆ ಮಾತನಾಡಿದ ಅವರು, ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಪ್ರಾಜೆಕ್ಟ್ ಟೈಗರ್‌ನ ಯಶಸ್ಸು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸಿದೆ ಮತ್ತು ಮತ್ತು ಅದೇ ಸಮಯದಲ್ಲಿ, ವಿಶ್ವದ ಒಟ್ಟು ಹುಲಿಗಳ ಪೈಕಿ ಶೇ.75 ರಷ್ಟು ಭಾರತದಲ್ಲಿದೆ ಎಂದು ಹೇಳಿದರು.

ವಿಶ್ವದ ಭೂ ಪ್ರದೇಶದ ಕೇವಲ ಶೇ.2.4 ರಷ್ಟು ಭೂಮಿಯನ್ನು ಹೊಂದಿರುವ ಭಾರತವು ಜಾಗತಿಕ ವೈವಿಧ್ಯತೆಗೆ ಶೇ.8 ರಷ್ಟು ಕೊಡುಗೆ ನೀಡುತ್ತದೆ. ದಶಕಗಳ ಹಿಂದೆಯೇ ಭಾರತದಲ್ಲಿ ಚಿತಾಗಳು ಅಳಿದು ಹೋಗಿದ್ದವು. ನಾವು ಈಗ ಚೀತಾವನ್ನು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ವರದಿಯಲ್ಲಿ ಏನಿದೆ? : ಭಾರತದಲ್ಲಿ ಒಟ್ಟು ಈಗ 3167 ಹುಲಿಗಳಿವೆ. 2006ರಲ್ಲಿ 1,411 ಇದ್ದರೆ 2018ರಲ್ಲಿ ಈ ಸಂಖ್ಯೆ 2,967ಕ್ಕೆ ಏರಿಕೆಯಾಗಿತ್ತು. 30 ಸಾವಿರಕ್ಕೂ ಹೆಚ್ಚು ಏಷ್ಯಾಟಿಕ್ ಆನೆಗಳಿದ್ದರೆ ಒಂದು ಕೊಂಬಿನ ಘೇಂಡಾಮೃಗ 3000 ಇದೆ. 675 ಸಿಂಹಗಳು ಇದೆ.

ಯಾವುದು ಎಷ್ಟಿದೆ?: 2014ರಲ್ಲಿ 2,226 ಹುಲಿಗಳಿದ್ದರೆ 2022ರಲ್ಲಿ ಇದು 3,167ಕ್ಕೆ ಏರಿಕೆಯಾಗಿದೆ. 2014ರಲ್ಲಿ 523 ಸಿಂಹಳಿದ್ದರೆ 2020ರಲ್ಲಿ 674ಕ್ಕೆ ಏರಿಕೆಯಾಗಿದೆ. 2014ರಲ್ಲಿ 7,910 ಚಿರತೆಗಳಿದ್ದರೆ 2018ರಲ್ಲಿ 12,852ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

9 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

9 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

9 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

9 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

9 hours ago