Advertisement
ಸುದ್ದಿಗಳು

ದೇಶದಲ್ಲಿ ಇದೆ 3167 ಹುಲಿಗಳು | ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ‌ : ಮೋದಿ

Share

ಭಾರತದಲ್ಲಿ ಈಗ 3,167 ಹುಲಿಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮೈಸೂರಿನ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಆಯೋಜನೆಗೊಂಡ ಹುಲಿ ಯೋಜನೆಯ ಸುವರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ನರೇಂದ್ರ ಮೋದಿ 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಪ್ರಾಜೆಕ್ಟ್ ಟೈಗರ್‌ನ ಯಶಸ್ಸು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸಿದೆ ಮತ್ತು ಮತ್ತು ಅದೇ ಸಮಯದಲ್ಲಿ, ವಿಶ್ವದ ಒಟ್ಟು ಹುಲಿಗಳ ಪೈಕಿ ಶೇ.75 ರಷ್ಟು ಭಾರತದಲ್ಲಿದೆ ಎಂದು ಹೇಳಿದರು.

ವಿಶ್ವದ ಭೂ ಪ್ರದೇಶದ ಕೇವಲ ಶೇ.2.4 ರಷ್ಟು ಭೂಮಿಯನ್ನು ಹೊಂದಿರುವ ಭಾರತವು ಜಾಗತಿಕ ವೈವಿಧ್ಯತೆಗೆ ಶೇ.8 ರಷ್ಟು ಕೊಡುಗೆ ನೀಡುತ್ತದೆ. ದಶಕಗಳ ಹಿಂದೆಯೇ ಭಾರತದಲ್ಲಿ ಚಿತಾಗಳು ಅಳಿದು ಹೋಗಿದ್ದವು. ನಾವು ಈಗ ಚೀತಾವನ್ನು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ವರದಿಯಲ್ಲಿ ಏನಿದೆ? : ಭಾರತದಲ್ಲಿ ಒಟ್ಟು ಈಗ 3167 ಹುಲಿಗಳಿವೆ. 2006ರಲ್ಲಿ 1,411 ಇದ್ದರೆ 2018ರಲ್ಲಿ ಈ ಸಂಖ್ಯೆ 2,967ಕ್ಕೆ ಏರಿಕೆಯಾಗಿತ್ತು. 30 ಸಾವಿರಕ್ಕೂ ಹೆಚ್ಚು ಏಷ್ಯಾಟಿಕ್ ಆನೆಗಳಿದ್ದರೆ ಒಂದು ಕೊಂಬಿನ ಘೇಂಡಾಮೃಗ 3000 ಇದೆ. 675 ಸಿಂಹಗಳು ಇದೆ.

ಯಾವುದು ಎಷ್ಟಿದೆ?: 2014ರಲ್ಲಿ 2,226 ಹುಲಿಗಳಿದ್ದರೆ 2022ರಲ್ಲಿ ಇದು 3,167ಕ್ಕೆ ಏರಿಕೆಯಾಗಿದೆ. 2014ರಲ್ಲಿ 523 ಸಿಂಹಳಿದ್ದರೆ 2020ರಲ್ಲಿ 674ಕ್ಕೆ ಏರಿಕೆಯಾಗಿದೆ. 2014ರಲ್ಲಿ 7,910 ಚಿರತೆಗಳಿದ್ದರೆ 2018ರಲ್ಲಿ 12,852ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago