Advertisement
ಸುದ್ದಿಗಳು

ದೇಶದಲ್ಲಿ ಇದೆ 3167 ಹುಲಿಗಳು | ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ‌ : ಮೋದಿ

Share

ಭಾರತದಲ್ಲಿ ಈಗ 3,167 ಹುಲಿಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮೈಸೂರಿನ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಆಯೋಜನೆಗೊಂಡ ಹುಲಿ ಯೋಜನೆಯ ಸುವರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ನರೇಂದ್ರ ಮೋದಿ 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಪ್ರಾಜೆಕ್ಟ್ ಟೈಗರ್‌ನ ಯಶಸ್ಸು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸಿದೆ ಮತ್ತು ಮತ್ತು ಅದೇ ಸಮಯದಲ್ಲಿ, ವಿಶ್ವದ ಒಟ್ಟು ಹುಲಿಗಳ ಪೈಕಿ ಶೇ.75 ರಷ್ಟು ಭಾರತದಲ್ಲಿದೆ ಎಂದು ಹೇಳಿದರು.

ವಿಶ್ವದ ಭೂ ಪ್ರದೇಶದ ಕೇವಲ ಶೇ.2.4 ರಷ್ಟು ಭೂಮಿಯನ್ನು ಹೊಂದಿರುವ ಭಾರತವು ಜಾಗತಿಕ ವೈವಿಧ್ಯತೆಗೆ ಶೇ.8 ರಷ್ಟು ಕೊಡುಗೆ ನೀಡುತ್ತದೆ. ದಶಕಗಳ ಹಿಂದೆಯೇ ಭಾರತದಲ್ಲಿ ಚಿತಾಗಳು ಅಳಿದು ಹೋಗಿದ್ದವು. ನಾವು ಈಗ ಚೀತಾವನ್ನು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ವರದಿಯಲ್ಲಿ ಏನಿದೆ? : ಭಾರತದಲ್ಲಿ ಒಟ್ಟು ಈಗ 3167 ಹುಲಿಗಳಿವೆ. 2006ರಲ್ಲಿ 1,411 ಇದ್ದರೆ 2018ರಲ್ಲಿ ಈ ಸಂಖ್ಯೆ 2,967ಕ್ಕೆ ಏರಿಕೆಯಾಗಿತ್ತು. 30 ಸಾವಿರಕ್ಕೂ ಹೆಚ್ಚು ಏಷ್ಯಾಟಿಕ್ ಆನೆಗಳಿದ್ದರೆ ಒಂದು ಕೊಂಬಿನ ಘೇಂಡಾಮೃಗ 3000 ಇದೆ. 675 ಸಿಂಹಗಳು ಇದೆ.

ಯಾವುದು ಎಷ್ಟಿದೆ?: 2014ರಲ್ಲಿ 2,226 ಹುಲಿಗಳಿದ್ದರೆ 2022ರಲ್ಲಿ ಇದು 3,167ಕ್ಕೆ ಏರಿಕೆಯಾಗಿದೆ. 2014ರಲ್ಲಿ 523 ಸಿಂಹಳಿದ್ದರೆ 2020ರಲ್ಲಿ 674ಕ್ಕೆ ಏರಿಕೆಯಾಗಿದೆ. 2014ರಲ್ಲಿ 7,910 ಚಿರತೆಗಳಿದ್ದರೆ 2018ರಲ್ಲಿ 12,852ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago