ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದೆ. ಈ ಸಂದರ್ಭ ದೇಶದ ವಿವಿದಡೆಯಿಂದ ಲಕ್ಷಾಂತರ ಜನರು ಭಾಗವಹಿಸುವರು. ಈ ವೇಳೆ ಭಕ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೋರ್ಟೇಬಲ್ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ವೈದ್ಯಕೀಯ ಸೇವೆಗೂ ಸಿದ್ಧತೆ ನಡೆದಿದೆ. ಆರೋಗ್ಯ ಮೈತ್ರಿ ವಿಪತ್ತು ನಿರ್ವಹಣಾ ಕ್ಯೂಬ್ (ಸಂಚಾರಿ ಆಸ್ಪತ್ರೆ) ವ್ಯವಸ್ಥೆಯನ್ನು ಮಾಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೊಬೈಲ್ ಆಸ್ಪತ್ರೆಗಳನ್ನು ಈಗ ಅಯೋಧ್ಯೆಯಲ್ಲಿ ನಿಯೋಜಿಸಲಾಗಿದೆ. ತ್ವರಿತ ಪ್ರತಿಕ್ರಿಯೆ ಮತ್ತು ಸಮಗ್ರ ಆರೈಕೆಗೆ ಒತ್ತು ನೀಡುತ್ತದೆ ಈ ವ್ಯವಸ್ಥೆ. ಇಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್ ಅನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.ಸುಲಭವಾಗಿ…
ಸುಲಭವಾಗಿ ಸಾಗಿಸಬಹುದಾದ 72 ಘಟಕಗಳನ್ನು ಆಯೋಜಿಸಲಾಗಿದೆ. ಮೂಲಭೂತ ನೆರವಿನಿಂದ ಸುಧಾರಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಆರೈಕೆಯವರೆಗೆ ಅಗತ್ಯತೆಗಳಿರುವ ವ್ಯವಸ್ಥೆ ಇದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…