ಇನ್ನು ಮುಂದೆ ಇಂದಿರಾ ಕ್ಯಾಂಟೀನ್‌ ನಲ್ಲಿ ಸಿಗಲಿದೆ ರಾಗಿ ಮುದ್ದೆ, ಜೋಳದ ರೊಟ್ಟಿ

May 25, 2023
4:07 PM

ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಜನರು ಹತ್ತಿರದ ಇಂದಿರಾ ಕ್ಯಾಂಟೀನ್‌ಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುವ ಅಪ್ಲಿಕೇಶನ್ ಅನ್ನೂ ಸಹ ಪ್ರಾರಂಭಿಸಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ 200 ರಿಂದ 250 ಕೋಟಿ ಬಜೆಟ್ ಮೀಸಲಿಡುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವಂತೆ ಮತ್ತು ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್ ಚಂದ್ರ ಕೆ ವಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ, ಸಂಚಾರಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಿ ವರದಿ ಸಲ್ಲಿಸುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ
August 21, 2026
6:41 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?
August 20, 2026
12:26 PM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror