Advertisement
ವಿಶೇಷ ವರದಿಗಳು

ಇನ್ನು ಮುಂದೆ ಇಂದಿರಾ ಕ್ಯಾಂಟೀನ್‌ ನಲ್ಲಿ ಸಿಗಲಿದೆ ರಾಗಿ ಮುದ್ದೆ, ಜೋಳದ ರೊಟ್ಟಿ

Share

ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಜನರು ಹತ್ತಿರದ ಇಂದಿರಾ ಕ್ಯಾಂಟೀನ್‌ಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುವ ಅಪ್ಲಿಕೇಶನ್ ಅನ್ನೂ ಸಹ ಪ್ರಾರಂಭಿಸಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ 200 ರಿಂದ 250 ಕೋಟಿ ಬಜೆಟ್ ಮೀಸಲಿಡುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವಂತೆ ಮತ್ತು ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್ ಚಂದ್ರ ಕೆ ವಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ, ಸಂಚಾರಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಿ ವರದಿ ಸಲ್ಲಿಸುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

17 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago