Advertisement
ಸುದ್ದಿಗಳು

#IndiraCanteen #NandiniMilk | ಇಂದಿರಾ ಕ್ಯಾಂಟೀನ್​ಗಳಿಗೆ ಮತ್ತಷ್ಟು ಹೈಟೆಕ್ ರೂಪ | ಇನ್ಮುಂದೆ ಊಟದ ಜೊತೆ ಮಾರಾಟವಾಗಲಿದೆ ನಂದಿನಿ ಉತ್ಪನ್ನಗಳು |

Share

ನಮ್ಮ ಹೆಮ್ಮೆಯ ನಂದಿನಿ #NandiniMilk ಉತ್ಪನ್ನಗಳನ್ನು ವಿವಿಧ ಸರಕಾರಿ ಸಂಘಗಳು, ಸಭೆ ಸಮಾರಂಭ, ಎಪಿಎಂಸಿ, ಮಳಿಗೆಗಳಲ್ಲಿ ಮಾರಾಟ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಇದೀಗ ಸಿದ್ದರಾಮಯ್ಯ ಈಗ ಮತ್ತೊಮ್ಮೆ ಸಿಎಂ ಆಗಿದ್ದು ತಮ್ಮ ಕನಸಿನ ಕೂಸಿನ ಯೋಜನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಇಂದಿರಾ ಕ್ಯಾಂಟೀನ್​ #IndiraCanteen ನಲ್ಲಿ ವಿವಿಧ ಬಗೆಯ ಅಡುಗೆ ಮಾಡಲು ಸಿದ್ಧತೆ  ಮಾಡಲಾಗಿದ್ದು ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ನಂದಿನಿ ಉತ್ಪನ್ನಗಳನ್ನೂ ನೀಡಲು ಚಿಂತನೆ ನಡೆದಿದೆ.

ಇಂದಿರಾ ಕ್ಯಾಂಟೀನ್‌ ಇನ್ನು ಮುಂದೆ ಇನ್ನಷ್ಟು ಗುಣಮಟ್ಟದ ಆಹಾರದಿಂದ ಕೂಡಿರಲಿದೆ. ಇದಕ್ಕಾಗಿಯೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ  ರುಚಿಕರವಾದ ಹೊಸ ಮೆನುವನ್ನು ಬಿಡುಗಡೆ ಮಾಡಲಾಗಿತ್ತು. ಇಂದಿರಾ ಕ್ಯಾಂಟೀನ್​ಗಳು  ಹೈಟೆಕ್ ರೂಪ ಪಡೆಯಲ್ಲಿವೆ.ಅದರ ಜೊತೆಗೇ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ನೀಡುವ ಯೋಜನೆ ಸಿದ್ಧವಾಗಿದೆ.
ಬೆಂಗಳೂರಿನ ಇಂದಿರಾ ಕ್ಯಾಂಟೀನ್​ಗೆ ಹೋದರೆ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುತ್ತೆ. ಈ ಬಗ್ಗೆ ಹಾಗೂ ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿದ್ದ 198 ಇಂದಿರಾ ಕ್ಯಾಂಟೀನ್​ಗಳ ಸಂಖ್ಯೆಯನ್ನ 250ಕ್ಕೆ ಏರಿಕೆ ಮಾಡಲು ಸಿಎಂ ಮುಂದಾಗಿದ್ದು ಇದರ ಜೊತೆ ನಂದಿನಿ ವ್ಯಾಪಾರ ವಹಿವಾಟು ಹೆಚ್ಚಿಸಲು ಇಂದಿರಾ ಕ್ಯಾಂಟೀನ್​ಗಳಲ್ಲಿಯೇ ಸರ್ಕಾರ ಹಾಗೂ ಸಹಯೋಗದಲ್ಲಿ ನಂದಿನಿ ಮಳಿಗೆ ತೆರಯಲು ಚಿಂತನೆ ನಡೆದಿದೆ. ನಂದಿನಿ ಬೊಕ್ಕಸ ತುಂಬಲು ಸರ್ಕಾರ ಹಾಗೂ ನೂತನ ಕೆಎಂ​ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಸ್ಟರ್ ಪ್ಲಾನ್ ಮಾಡಿದ್ದು ನಂದಿನಿ ಬ್ಯಾಂಡ್ ಹೆಚ್ಚಿಸಲು ಮುಂದಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

15 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago