Advertisement
ಸುದ್ದಿಗಳು

#IndiraCanteen #NandiniMilk | ಇಂದಿರಾ ಕ್ಯಾಂಟೀನ್​ಗಳಿಗೆ ಮತ್ತಷ್ಟು ಹೈಟೆಕ್ ರೂಪ | ಇನ್ಮುಂದೆ ಊಟದ ಜೊತೆ ಮಾರಾಟವಾಗಲಿದೆ ನಂದಿನಿ ಉತ್ಪನ್ನಗಳು |

Share

ನಮ್ಮ ಹೆಮ್ಮೆಯ ನಂದಿನಿ #NandiniMilk ಉತ್ಪನ್ನಗಳನ್ನು ವಿವಿಧ ಸರಕಾರಿ ಸಂಘಗಳು, ಸಭೆ ಸಮಾರಂಭ, ಎಪಿಎಂಸಿ, ಮಳಿಗೆಗಳಲ್ಲಿ ಮಾರಾಟ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಇದೀಗ ಸಿದ್ದರಾಮಯ್ಯ ಈಗ ಮತ್ತೊಮ್ಮೆ ಸಿಎಂ ಆಗಿದ್ದು ತಮ್ಮ ಕನಸಿನ ಕೂಸಿನ ಯೋಜನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಇಂದಿರಾ ಕ್ಯಾಂಟೀನ್​ #IndiraCanteen ನಲ್ಲಿ ವಿವಿಧ ಬಗೆಯ ಅಡುಗೆ ಮಾಡಲು ಸಿದ್ಧತೆ  ಮಾಡಲಾಗಿದ್ದು ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ನಂದಿನಿ ಉತ್ಪನ್ನಗಳನ್ನೂ ನೀಡಲು ಚಿಂತನೆ ನಡೆದಿದೆ.

ಇಂದಿರಾ ಕ್ಯಾಂಟೀನ್‌ ಇನ್ನು ಮುಂದೆ ಇನ್ನಷ್ಟು ಗುಣಮಟ್ಟದ ಆಹಾರದಿಂದ ಕೂಡಿರಲಿದೆ. ಇದಕ್ಕಾಗಿಯೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ  ರುಚಿಕರವಾದ ಹೊಸ ಮೆನುವನ್ನು ಬಿಡುಗಡೆ ಮಾಡಲಾಗಿತ್ತು. ಇಂದಿರಾ ಕ್ಯಾಂಟೀನ್​ಗಳು  ಹೈಟೆಕ್ ರೂಪ ಪಡೆಯಲ್ಲಿವೆ.ಅದರ ಜೊತೆಗೇ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ನೀಡುವ ಯೋಜನೆ ಸಿದ್ಧವಾಗಿದೆ.
ಬೆಂಗಳೂರಿನ ಇಂದಿರಾ ಕ್ಯಾಂಟೀನ್​ಗೆ ಹೋದರೆ ಊಟದ ಜೊತೆ ನಂದಿನಿ ಐಸ್ ಕ್ರೀಮ್, ಚಾಕಲೇಟ್, ಬಿಸ್ಕೇಟ್, ಹಾಲು, ಮೊಸರು, ತುಪ್ಪಾ ಕೂಡಾ ಸಿಗುತ್ತೆ. ಈ ಬಗ್ಗೆ ಹಾಗೂ ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿದ್ದ 198 ಇಂದಿರಾ ಕ್ಯಾಂಟೀನ್​ಗಳ ಸಂಖ್ಯೆಯನ್ನ 250ಕ್ಕೆ ಏರಿಕೆ ಮಾಡಲು ಸಿಎಂ ಮುಂದಾಗಿದ್ದು ಇದರ ಜೊತೆ ನಂದಿನಿ ವ್ಯಾಪಾರ ವಹಿವಾಟು ಹೆಚ್ಚಿಸಲು ಇಂದಿರಾ ಕ್ಯಾಂಟೀನ್​ಗಳಲ್ಲಿಯೇ ಸರ್ಕಾರ ಹಾಗೂ ಸಹಯೋಗದಲ್ಲಿ ನಂದಿನಿ ಮಳಿಗೆ ತೆರಯಲು ಚಿಂತನೆ ನಡೆದಿದೆ. ನಂದಿನಿ ಬೊಕ್ಕಸ ತುಂಬಲು ಸರ್ಕಾರ ಹಾಗೂ ನೂತನ ಕೆಎಂ​ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಸ್ಟರ್ ಪ್ಲಾನ್ ಮಾಡಿದ್ದು ನಂದಿನಿ ಬ್ಯಾಂಡ್ ಹೆಚ್ಚಿಸಲು ಮುಂದಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

11 minutes ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

5 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

13 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago