ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

May 20, 2025
7:53 PM

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗದಲ್ಲಿನ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರೊಂದಿಗೆ ದೆಹಲಿಯಲ್ಲಿ ನಿನ್ನೆ ಸಂವಾದ ನಡೆಸಿದ ಸಚಿವರು, ಸಿಂಧು ನದಿಯ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಸಂಬಂಧ ಸಮಗ್ರ ಕಾರ್ಯತಂತ್ರ ರೂಪಿಸಿದರೆ ಭವಿಷ್ಯದಲ್ಲಿ ರೈತರೂ ಸೇರಿದಂತೆ ಎಲ್ಲ ವರ್ಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.ಸಿಂಧು ಜಲ ಒಪ್ಪಂದ ಅಮಾನತ್ತಿನಲ್ಲಿಟ್ಟಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಸಚಿವರು ತಿಳಿಸಿದರು.ಈ ನದಿಯಿಂದ ಪಾಕಿಸ್ತಾನಕ್ಕೆ ನೀರು ಒದಗಿಸಿದರೆ, ಭಾರತದ ರೈತರಿಗೆ ಅನ್ಯಾಯವಾಗಲಿದೆ ಎಂದೂ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಸಚಿವರು ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರಲ್ಲದೆ, ಸಿಂಧು ಜಲ ಒಪ್ಪಂದ ಕುರಿತಂತೆ ಅವರ ಸಲಹೆ, ಸೂಚನೆಗಳನ್ನು ಆಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror