ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗದಲ್ಲಿನ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರೊಂದಿಗೆ ದೆಹಲಿಯಲ್ಲಿ ನಿನ್ನೆ ಸಂವಾದ ನಡೆಸಿದ ಸಚಿವರು, ಸಿಂಧು ನದಿಯ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಸಂಬಂಧ ಸಮಗ್ರ ಕಾರ್ಯತಂತ್ರ ರೂಪಿಸಿದರೆ ಭವಿಷ್ಯದಲ್ಲಿ ರೈತರೂ ಸೇರಿದಂತೆ ಎಲ್ಲ ವರ್ಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.ಸಿಂಧು ಜಲ ಒಪ್ಪಂದ ಅಮಾನತ್ತಿನಲ್ಲಿಟ್ಟಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಸಚಿವರು ತಿಳಿಸಿದರು.ಈ ನದಿಯಿಂದ ಪಾಕಿಸ್ತಾನಕ್ಕೆ ನೀರು ಒದಗಿಸಿದರೆ, ಭಾರತದ ರೈತರಿಗೆ ಅನ್ಯಾಯವಾಗಲಿದೆ ಎಂದೂ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಸಚಿವರು ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರಲ್ಲದೆ, ಸಿಂಧು ಜಲ ಒಪ್ಪಂದ ಕುರಿತಂತೆ ಅವರ ಸಲಹೆ, ಸೂಚನೆಗಳನ್ನು ಆಲಿಸಿದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…