Advertisement
ರಾಷ್ಟ್ರೀಯ

ಸಿಂಧೂ ನದಿ ಒಪ್ಪಂದ ರದ್ದತಿ ಪರಿಣಾಮ – ಪಾಕಿಸ್ತಾನ ಕೃಷಿ ಪರಿಸ್ಥಿತಿ ಏನಾಗಿದೆ..?

Share

ಸಿಂಧೂ ನದಿ ಜಲಾನಯನ ಪ್ರದೇಶದ ನೀರಿನ ಮೇಲೆ ಹೆಚ್ಚು ಅವಲಂಬಿತವಾಗಿರುವ ಪಾಕಿಸ್ತಾನ, ಈ ವರ್ಷದ ಆರಂಭದಲ್ಲಿ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ ನಂತರ ಅಲ್ಲಿನ ಕೃಷಿ ಪರಿಸ್ಥಿತಿ ಹೇಗಿದೆ..? ಈ ಬಗ್ಗೆ ಸಿಡ್ನಿ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ & ಪೀಸ್ ಪ್ರಕಟಿಸಿದ ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಿದೆ. ಸದ್ಯ ಅಲ್ಲಿ ನೀರಿನ ಕೊರತೆಯಿಂದ ಕೃಷಿ ಸಂಕಷ್ಟಕ್ಕೆ ಹೋಗುತ್ತಿದೆ.

ಈ ವರ್ಷದ ಏಪ್ರಿಲ್ ನಲ್ಲಿ ನಡೆದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದೆ. ಈ ಬೆಳವಣಿಗೆಯು ಪಾಕಿಸ್ತಾನಕ್ಕೆ ದೊಡ್ಡ ಹಿನ್ನಡೆಯನ್ನೂ ಸೂಚಿಸುತ್ತದೆ. ಏಕೆಂದರೆ ಅವರ ಕೃಷಿಯು ಸಿಂಧೂ ನದಿ ವ್ಯವಸ್ಥೆಯ ಮೇಲೆ ಶೇ. 80%ರಷ್ಟು ಅವಲಂಬಿತವಾಗಿದೆ. ಸದ್ಯ ನೀರಿನ ಕೊರತೆಯಿಂದ  ಕೃಷಿ ಚಟುವಟಿಕೆಗಳು ಗಂಭೀರ ಪರಿಣಾಮವನ್ನು ಎದುರಿಸುತ್ತಿವೆ. ಪಾಕಿಸ್ತಾನದ ಸಂಕಟಗಳನ್ನು ಸಿಡ್ನಿ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ & ಪೀಸ್ “ಪರಿಸರ ಸಂಕಷ್ಟದ ವರದಿ 2025​” ರಲ್ಲಿ  ಸ್ಪಷ್ಟವಾಗಿ ಉಲ್ಲೇಖಿಸಲಾಗಿದ್ದು, ನೀರಿನ ತೀವ್ರ ಕೊರತೆಯು ಪಾಕಿಸ್ತಾನದ ಕೃಷಿ ಭೂಮಿಯನ್ನು ಮರಭೂಮಿಯನ್ನಾಗಿ ಪರಿವರ್ತಿಸುತ್ತಿದೆ ಎಂದು ಎಚ್ಚರಿಸಿದೆ.

ನಿರ್ಣಾಯಕ ಕ್ಷಣಗಳಲ್ಲಿ ಸಣ್ಣ ಅಡೆತಡೆಗಳು ಸಹ ಪಾಕಿಸ್ತಾನದ ಕೃಷಿಗೆ ಗಂಭೀರ ಹಾನಿ ತರಬಹುದು. ಏಕೆಂದರೆ ಪಾಕಿಸ್ತಾನದಲ್ಲಿ ನದಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಕಷ್ಟು ಸಂಗ್ರಹಣಾ ಸ್ಥಳವಿಲ್ಲ. ಪಾಕಿಸ್ತಾನದ ಸ್ವಂತ ಅಣೆಕಟ್ಟು ಸಾಮರ್ಥ್ಯವು ಸುಮಾರು 30 ದಿನಗಳ ಸಿಂಧೂ ಹರಿವನ್ನು ಮಾತ್ರ ಹಿಡಿದುಕೊಳ್ಳಬಲ್ಲದು. ಹೀಗಾಗಿ ಯಾವುದೇ ದೀರ್ಘಕಾಲದ ನೀರಿನ ಅಲಭ್ಯತೆ ಹಾನಿಕಾರಕವಾಗಿರುತ್ತದೆ ಎಂದು ವರದಿ ಹೇಳಿದೆ. ಭಾರತದ ಪ್ರಸ್ತುತ ಮೂಲಸೌಕರ್ಯವು ನದಿ ಹರಿವನ್ನು ನಿಲ್ಲಿಸುವ ಸಾಮರ್ಥ್ಯವನ್ನು ಮಿತಿಗೊಳಿಸುತ್ತದೆ ಎಂದು ವರದಿ ಹೇಳಿದೆ, ಸಣ್ಣ ಅಡಚಣೆಗಳು ಸಹ ಪಾಕಿಸ್ತಾನದ ಕೃಷಿ ವಲಯಕ್ಕೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಸ್ಪಷ್ಟಪಡಿಸಿದೆ. ಅಂದರೆ ಪಾಕಿಸ್ತಾನದ ಕೃಷಿ ಚಟುವಟಿಕೆಗಳು ಹೆಚ್ಚು ಕಡಿಮೆ ಸ್ಥಗಿತಗೊಳ್ಳುವ ಹಂತವನ್ನು ತಲುಪಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

37 minutes ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

9 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

11 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

23 hours ago