ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

April 26, 2025
9:21 AM

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨ ಸಾವಿರದ ೮೬೩ ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನಕ್ಕೆ ರೈತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೈಗಾರಿಕಾ ಪುದೇಶವನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಯೋಜನೆಯ ಅನುಷ್ಠಾನದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ರೈತರು ಮತ್ತು ಅಧಿಕಾರಿಗಳ ಸಭೆಯಲ್ಲಿ ಸಚಿವರು ಭಾಗಿಯಾಗಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು, ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ ಎಂದರು. ಇದು ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪೂರಕವಾಗಲಿದೆ. ಈಗಾಗಲೇ ರೈತರನ್ನು ಕರೆಯಿಸಿ ಅವರು ಸ್ವಯಂಪ್ರೇರಿತರಾಗಿ ಭೂಮಿ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಮನವಿಮಾಡಿ ಮನವೊಲಿಸುವ ಪ್ರಯತ್ನಗಳು ನಡೆದಿವೆ. ಕೆಲವು ರೈತರು ಭೂಮಿ ನೀಡಲು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಕೆಲವು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror