Advertisement
MIRROR FOCUS

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

Share

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨ ಸಾವಿರದ ೮೬೩ ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನಕ್ಕೆ ರೈತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೈಗಾರಿಕಾ ಪುದೇಶವನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಯೋಜನೆಯ ಅನುಷ್ಠಾನದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ರೈತರು ಮತ್ತು ಅಧಿಕಾರಿಗಳ ಸಭೆಯಲ್ಲಿ ಸಚಿವರು ಭಾಗಿಯಾಗಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು, ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ ಎಂದರು. ಇದು ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪೂರಕವಾಗಲಿದೆ. ಈಗಾಗಲೇ ರೈತರನ್ನು ಕರೆಯಿಸಿ ಅವರು ಸ್ವಯಂಪ್ರೇರಿತರಾಗಿ ಭೂಮಿ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಮನವಿಮಾಡಿ ಮನವೊಲಿಸುವ ಪ್ರಯತ್ನಗಳು ನಡೆದಿವೆ. ಕೆಲವು ರೈತರು ಭೂಮಿ ನೀಡಲು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಕೆಲವು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 hour ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

8 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

20 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

20 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago