ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿ.ಪಂ. ಸಿಇಓ ಸೂಚನೆ

February 17, 2022
8:02 PM

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಾಕೀತು ಮಾಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಫೆ.16ರ ಬುಧವಾರ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಸಂಬಂಧಿಸಿದಂತೆ ಬ್ಯಾಂಕರ್ಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ, ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ಕೃಷಿ ಚಟುವಟಿಕೆಗಳು, ತೋಟಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಕಿರು ಉದ್ದಿಮೆ ನಡೆಸಲು ಆಸಕ್ತರಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಹೆಚ್ಚಿನ ಆದ್ಯತೆ ಇದೆ, ಮೀನಿನ ವಿವಿಧ ಬಗೆಯ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ನೀಡಬಹುದಾಗಿದೆ, ಕಿರು ಆಹಾರ ಉದ್ದಿಮೆದಾರರು ಒಣ ಮೀನು, ಉಪ್ಪಿನಕಾಯಿ, ಚಿಪ್ಸ್, ಮೀನಿನ ಎಣ್ಣೆ, ಜ್ಯೂಸ್, ಮಾತ್ರೆ, ಮೀನಿನ ಚಟ್ನಿ ಪುಡಿ ಇನ್ನಿತರ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಯೋಜನಾ ವರದಿಯನ್ನು ತಯಾರಿಸಿ ಬ್ಯಾಂಕ್‍ಗಳಿಗೆ ಸಲ್ಲಿಸಿದಲ್ಲಿ, ಅದರ ಆಧಾರದಲ್ಲಿ ಬ್ಯಾಂಕುಗಳು ಸಾಲಸೌಲಭ್ಯ ನೀಡುತ್ತವೆ, ಈ ಯೋಜನೆಯಡಿ ಮುಖ್ಯವಾಗಿ ಗರಿಷ್ಠ 10 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಹಾಗೂ ಶೇ.50ರಷ್ಟು ಸಬ್ಸಿಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಕಿರು ಆಹಾರ ಉದ್ದಿಮೆಯಡಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯತೆಯ ಬಗ್ಗೆ ತಿಳಿಸಿದ ಡಾ. ಕುಮಾರ್ ಅವರು, ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಬ್ಯಾಂಕ್‍ಗಳಿಗೆ ಕಿರು ಆಹಾರ ಉದ್ದಿಮೆಯಡಿ ಅಗತ್ಯ ನೆರವು ನೀಡಲು ಗುರಿಯನ್ನು ನಿಗದಿ ಪಡಿಸಲಾಗಿದೆ, ಆಸಕ್ತರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ, ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಲೋಪದೋಷಗಳಿದ್ದಲ್ಲೀ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್, ನಬಾರ್ಡ್‍ನ ಸಹಾಯಕ ಜನರಲ್ ಮ್ಯಾನೇಜರ್ ಸಂಗೀತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ವಿವಿಧ ಬ್ಯಾಂಕುಗಳ ಮ್ಯಾನೇಜರ್‍ಗಳು ಹಾಗೂ ಇತರರು ಸಭೆಯಲ್ಲಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror