Advertisement
ಸುದ್ದಿಗಳು

ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿ.ಪಂ. ಸಿಇಓ ಸೂಚನೆ

Share

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಾಕೀತು ಮಾಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಫೆ.16ರ ಬುಧವಾರ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಸಂಬಂಧಿಸಿದಂತೆ ಬ್ಯಾಂಕರ್ಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ, ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ಕೃಷಿ ಚಟುವಟಿಕೆಗಳು, ತೋಟಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಕಿರು ಉದ್ದಿಮೆ ನಡೆಸಲು ಆಸಕ್ತರಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಹೆಚ್ಚಿನ ಆದ್ಯತೆ ಇದೆ, ಮೀನಿನ ವಿವಿಧ ಬಗೆಯ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ನೀಡಬಹುದಾಗಿದೆ, ಕಿರು ಆಹಾರ ಉದ್ದಿಮೆದಾರರು ಒಣ ಮೀನು, ಉಪ್ಪಿನಕಾಯಿ, ಚಿಪ್ಸ್, ಮೀನಿನ ಎಣ್ಣೆ, ಜ್ಯೂಸ್, ಮಾತ್ರೆ, ಮೀನಿನ ಚಟ್ನಿ ಪುಡಿ ಇನ್ನಿತರ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಯೋಜನಾ ವರದಿಯನ್ನು ತಯಾರಿಸಿ ಬ್ಯಾಂಕ್‍ಗಳಿಗೆ ಸಲ್ಲಿಸಿದಲ್ಲಿ, ಅದರ ಆಧಾರದಲ್ಲಿ ಬ್ಯಾಂಕುಗಳು ಸಾಲಸೌಲಭ್ಯ ನೀಡುತ್ತವೆ, ಈ ಯೋಜನೆಯಡಿ ಮುಖ್ಯವಾಗಿ ಗರಿಷ್ಠ 10 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಹಾಗೂ ಶೇ.50ರಷ್ಟು ಸಬ್ಸಿಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಕಿರು ಆಹಾರ ಉದ್ದಿಮೆಯಡಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯತೆಯ ಬಗ್ಗೆ ತಿಳಿಸಿದ ಡಾ. ಕುಮಾರ್ ಅವರು, ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಬ್ಯಾಂಕ್‍ಗಳಿಗೆ ಕಿರು ಆಹಾರ ಉದ್ದಿಮೆಯಡಿ ಅಗತ್ಯ ನೆರವು ನೀಡಲು ಗುರಿಯನ್ನು ನಿಗದಿ ಪಡಿಸಲಾಗಿದೆ, ಆಸಕ್ತರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ, ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಲೋಪದೋಷಗಳಿದ್ದಲ್ಲೀ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್, ನಬಾರ್ಡ್‍ನ ಸಹಾಯಕ ಜನರಲ್ ಮ್ಯಾನೇಜರ್ ಸಂಗೀತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ವಿವಿಧ ಬ್ಯಾಂಕುಗಳ ಮ್ಯಾನೇಜರ್‍ಗಳು ಹಾಗೂ ಇತರರು ಸಭೆಯಲ್ಲಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago