Advertisement
ಸುದ್ದಿಗಳು

ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿ.ಪಂ. ಸಿಇಓ ಸೂಚನೆ

Share

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಾಕೀತು ಮಾಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಫೆ.16ರ ಬುಧವಾರ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಸಂಬಂಧಿಸಿದಂತೆ ಬ್ಯಾಂಕರ್ಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ, ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ಕೃಷಿ ಚಟುವಟಿಕೆಗಳು, ತೋಟಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಕಿರು ಉದ್ದಿಮೆ ನಡೆಸಲು ಆಸಕ್ತರಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಹೆಚ್ಚಿನ ಆದ್ಯತೆ ಇದೆ, ಮೀನಿನ ವಿವಿಧ ಬಗೆಯ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ನೀಡಬಹುದಾಗಿದೆ, ಕಿರು ಆಹಾರ ಉದ್ದಿಮೆದಾರರು ಒಣ ಮೀನು, ಉಪ್ಪಿನಕಾಯಿ, ಚಿಪ್ಸ್, ಮೀನಿನ ಎಣ್ಣೆ, ಜ್ಯೂಸ್, ಮಾತ್ರೆ, ಮೀನಿನ ಚಟ್ನಿ ಪುಡಿ ಇನ್ನಿತರ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಯೋಜನಾ ವರದಿಯನ್ನು ತಯಾರಿಸಿ ಬ್ಯಾಂಕ್‍ಗಳಿಗೆ ಸಲ್ಲಿಸಿದಲ್ಲಿ, ಅದರ ಆಧಾರದಲ್ಲಿ ಬ್ಯಾಂಕುಗಳು ಸಾಲಸೌಲಭ್ಯ ನೀಡುತ್ತವೆ, ಈ ಯೋಜನೆಯಡಿ ಮುಖ್ಯವಾಗಿ ಗರಿಷ್ಠ 10 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಹಾಗೂ ಶೇ.50ರಷ್ಟು ಸಬ್ಸಿಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

Advertisement

ಕಿರು ಆಹಾರ ಉದ್ದಿಮೆಯಡಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯತೆಯ ಬಗ್ಗೆ ತಿಳಿಸಿದ ಡಾ. ಕುಮಾರ್ ಅವರು, ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಬ್ಯಾಂಕ್‍ಗಳಿಗೆ ಕಿರು ಆಹಾರ ಉದ್ದಿಮೆಯಡಿ ಅಗತ್ಯ ನೆರವು ನೀಡಲು ಗುರಿಯನ್ನು ನಿಗದಿ ಪಡಿಸಲಾಗಿದೆ, ಆಸಕ್ತರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ, ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಲೋಪದೋಷಗಳಿದ್ದಲ್ಲೀ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್, ನಬಾರ್ಡ್‍ನ ಸಹಾಯಕ ಜನರಲ್ ಮ್ಯಾನೇಜರ್ ಸಂಗೀತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ವಿವಿಧ ಬ್ಯಾಂಕುಗಳ ಮ್ಯಾನೇಜರ್‍ಗಳು ಹಾಗೂ ಇತರರು ಸಭೆಯಲ್ಲಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago