ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

April 29, 2024
12:14 PM

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ.

Advertisement
ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಸುಕಿನ ಜಾವ 1.27 ರ ಸುಮಾರಿಗೆ  ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್‌ ಅವರು ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group