Advertisement
ನಿಧನ‌ ಸುದ್ದಿಗಳು

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

Share

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ.

ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಸುಕಿನ ಜಾವ 1.27 ರ ಸುಮಾರಿಗೆ  ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್‌ ಅವರು ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago