ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ‘ಮೇವು ಮೇಳ’ ಆಯೋಜಿಸಲಾಗಿತ್ತು. ಈ ಮೂಲಕ ಹೈನುಗಾರರಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ.ಸಿ. ವೀರಣ್ಣ ಮೇವು ಮೇಳಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮೇವಿನ ಬೀಜ ಸೇರಿದಂತೆ ಇನ್ನಿತರ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮತ್ತು ರೈತರು ಮಳಿಗೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
ಮೇವಿನ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮೇವು ಬೆಳೆಯುವ ಬೀಜಗಳು ಸೇರಿದಂತೆ ಮೇವಿಗೆ ಸಂಬಂಧಿಸಿದ ಇನ್ನಿತರ ಬೇರು ಉತ್ಪಾದನೆ ಹಾಗೂ ಮೇವಿನ ಬೀಜದಿಂದ ಹೆಚ್ಚು ಇಳುವರಿ ಪಡೆಯುವ ಕುರಿತು ಈ ಮೇಳ ಬೆಳಕು ಚೆಲ್ಲಲಿದೆ. ರೈತರಿಗೆ ಹಾಗೂ ಹೈನುಗಾರರಿಗೆ ಅನುಕೂಲವಾಗಲಿದೆ ಎಂದು ಪ್ರೊ. ಕೆ. ಸಿ. ವೀರಣ್ಣ ಹೇಳಿದರು.