ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ‘ಮೇವು ಮೇಳ’ ಆಯೋಜಿಸಲಾಗಿತ್ತು. ಈ ಮೂಲಕ ಹೈನುಗಾರರಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ.ಸಿ. ವೀರಣ್ಣ ಮೇವು ಮೇಳಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮೇವಿನ ಬೀಜ ಸೇರಿದಂತೆ ಇನ್ನಿತರ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮತ್ತು ರೈತರು ಮಳಿಗೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
ಮೇವಿನ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮೇವು ಬೆಳೆಯುವ ಬೀಜಗಳು ಸೇರಿದಂತೆ ಮೇವಿಗೆ ಸಂಬಂಧಿಸಿದ ಇನ್ನಿತರ ಬೇರು ಉತ್ಪಾದನೆ ಹಾಗೂ ಮೇವಿನ ಬೀಜದಿಂದ ಹೆಚ್ಚು ಇಳುವರಿ ಪಡೆಯುವ ಕುರಿತು ಈ ಮೇಳ ಬೆಳಕು ಚೆಲ್ಲಲಿದೆ. ರೈತರಿಗೆ ಹಾಗೂ ಹೈನುಗಾರರಿಗೆ ಅನುಕೂಲವಾಗಲಿದೆ ಎಂದು ಪ್ರೊ. ಕೆ. ಸಿ. ವೀರಣ್ಣ ಹೇಳಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…