ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ‘ಮೇವು ಮೇಳ’ ಆಯೋಜಿಸಲಾಗಿತ್ತು. ಈ ಮೂಲಕ ಹೈನುಗಾರರಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ.ಸಿ. ವೀರಣ್ಣ ಮೇವು ಮೇಳಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮೇವಿನ ಬೀಜ ಸೇರಿದಂತೆ ಇನ್ನಿತರ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮತ್ತು ರೈತರು ಮಳಿಗೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
ಮೇವಿನ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮೇವು ಬೆಳೆಯುವ ಬೀಜಗಳು ಸೇರಿದಂತೆ ಮೇವಿಗೆ ಸಂಬಂಧಿಸಿದ ಇನ್ನಿತರ ಬೇರು ಉತ್ಪಾದನೆ ಹಾಗೂ ಮೇವಿನ ಬೀಜದಿಂದ ಹೆಚ್ಚು ಇಳುವರಿ ಪಡೆಯುವ ಕುರಿತು ಈ ಮೇಳ ಬೆಳಕು ಚೆಲ್ಲಲಿದೆ. ರೈತರಿಗೆ ಹಾಗೂ ಹೈನುಗಾರರಿಗೆ ಅನುಕೂಲವಾಗಲಿದೆ ಎಂದು ಪ್ರೊ. ಕೆ. ಸಿ. ವೀರಣ್ಣ ಹೇಳಿದರು.
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…