Advertisement
ರಾಷ್ಟ್ರೀಯ

ಸರ್ಕಾರಿ ನೌಕರಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ

Share

ಸರ್ಕಾರಿ ಹುದ್ದೆಗಳಿಗೆ ಹೋಗಲು ಇಚ್ಚಿಸುವವರಿಗೆ ಕೇಂದ್ರ ಸರಕಾರ ಸಿಹಿಸುದ್ದಿಯನ್ನು ನೀಡಿದೆ. ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ತರುವ ಮೂಲಕ ಪರೀಕ್ಷಾ ತಯಾರಿಯ ಹಾದಿಯನ್ನು ಸುಲಭಗೊಳಿಸಿದೆ. ಸರಕಾರಿ ನೌಕರಿಗಳಿಗೆ ಇರುವ ಪ್ರವೇಶ ಪರೀಕ್ಷೆಗಳನ್ನು ಸಾರ್ವತ್ರಿಕ ಗೊಳಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ನೇಮಕಾತಿ ಏಜೆನ್ಸಿಯನ್ನ ಸ್ಥಾಪಿಸಲು ನಿರ್ಧರಿಸಿದೆ.

ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಗೆಜೆಟೆಡ್ ಅಲ್ಲದ ಹುದ್ದೆಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲು ಹೊಸದಾಗಿ ರಚಿಸಲಾದ ಸಂಸ್ಥೆಯು ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲಿದೆ. ಸಾಮಾನ್ಯ ಅರ್ಹತಾ ಪರೀಕ್ಷೆಯಡಿ, ಸ್ಟಾಫ್ ಸೆಲೆಕ್ಶನ್ ಕಮಿಷನ್ (ಎಸ್ ಎಸ್ ಸಿ) ಮತ್ತು ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಮತ್ತು ರೈಲ್ವೆ ನೇಮಕಾತಿ ಮಂಡಳಿ (RRB) ಪರೀಕ್ಷೆಗಳನ್ನ ನಡೆಸಲಿದೆ. ಹೊಸ ನೇಮಕಾತಿ ಏಜೆನ್ಸಿಯನ್ನ ರಚಿಸಲು ಕೇಂದ್ರ ಸರ್ಕಾರ ₹1,517.57 ಕೋಟಿ ಮಂಜೂರು ಮಾಡಿದೆ.

ಕೇಂದ್ರ ಸರ್ಕಾರ ನೀಡಿರುವ ಮಾಹಿತಿಗಳ ಪ್ರಕಾರ, ಈ ರಾಷ್ಟ್ರೀಯ ನೇಮಕಾತಿ ಸಂಸ್ಥೆಯು ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ವಿವಿಧ ಸಮಾನ ನೇಮಕಾತಿಯ ಜೊತೆಗೆ ಸರ್ಕಾರದ ಗ್ರೂಪ್-ಬಿ (ಗೆಜೆಟೆಡ್ ಅಲ್ಲದ), ಗ್ರೂಪ್-ಸಿ (ತಾಂತ್ರಿಕೇತರ) ಮತ್ತು ಕ್ಲರಿಕಲ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತದೆ.

ಪದವಿ, ಹೈಯರ್ ಸೆಕೆಂಡರಿ (12ನೇ ಪಾಸ್) ಮತ್ತು ಮೆಟ್ರಿಕ್ಯುಲೇಟ್ (10ನೇ ಪಾಸ್) ಅಭ್ಯರ್ಥಿಗಳಿಗೆ ತಲಾ ಒಂದು ಪ್ರತ್ಯೇಕ ಸಿಇಟಿ ಇರುತ್ತದೆ. ‘ಈ ಪರೀಕ್ಷೆಯ ಪಠ್ಯಕ್ರಮ ವು ಸಾಮಾನ್ಯವಾಗಿರುತ್ತದೆ. ಪ್ರಸ್ತುತ ಪ್ರತಿ ಪರೀಕ್ಷೆಗೂ ಪ್ರತ್ಯೇಕವಾಗಿ ಸಿದ್ಧತೆ ನಡೆಸಲು ಅಗತ್ಯವಿರುವ ಅಭ್ಯರ್ಥಿಗಳ ಹೊರೆಯನ್ನ ಇದು ಕಡಿಮೆ ಮಾಡಲಿದೆ’ ಎಂದು ಕೇಂದ್ರ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅದರೊಂದಿಗೆ ಸಿಇಟಿ ಅಂಕ ಮಟ್ಟದಲ್ಲಿ ಮಾಡಿದ ಸ್ಕ್ರೀನಿಂಗ್ ಆಧಾರದ ಮೇಲೆ, ಆಯಾ ನೇಮಕಾತಿ ಏಜೆನ್ಸಿಗಳು ನಡೆಸುವ ಪರೀಕ್ಷೆಯ ಪ್ರತ್ಯೇಕ ವಿಶೇಷ ಹಂತಗಳ (II, III ಇತ್ಯಾದಿ) ಮೂಲಕ ನೇಮಕಾತಿಗೆ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಹಾಗೂ ಸಿಇಟಿಯ ಅಂಕವು ಮೂರು ವರ್ಷಗಳ ಕಾಲ ಸಿಂಧುವಾಗಿರುತ್ತದೆ. ವಯೋಮಿತಿಯ ಮಿತಿಗೆ ಒಳಪಟ್ಟು ಸಿಇಟಿಯಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿ ಎಷ್ಟು ಪ್ರಯತ್ನ ಮಾಡಬೇಕು ಎಂಬ ಬಗ್ಗೆ ಯಾವುದೇ ನಿರ್ಬಂಧವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರವೇಶ ಪರೀಕ್ಷೆ ಬರೆಯಲು ಅಭ್ಯರ್ಥಿಗಳು ಹೆಚ್ಚು ಪ್ರಯಾಣ ಮಾಡುವ ಅಥವಾ ಪ್ರಯಾಸ ಪಡುವ ಅಗತ್ಯವಿರುವುದಿಲ್ಲ. ದೇಶಾದ್ಯಂತ ಪ್ರತಿ ಜಿಲ್ಲೆಗಳಲ್ಲೂ ಪರೀಕ್ಷೆಗಳನ್ನು ಆಯೋಜಿಸುವ ಯೋಜನೆಯನ್ನು ತರುವ ಆಲೋಚನೆ ಕೇಂದ್ರ ಸರ್ಕಾರದಾಗಿದೆ. ಅದರಿಂದ ಅಭ್ಯರ್ಥಿಗಳು ಪರೀಕ್ಷೆಗಾಗಿ ವ್ಯಯಮಾಡುವ ಸಮಯ ಹಾಗೂ ಹಣ ಉಳಿಯುತ್ತದೆ. ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಮತ್ತು ಕೇಂದ್ರಗಳನ್ನ ಆಯ್ಕೆ ಮಾಡಲು ಅವಕಾಶ ಕಲ್ಪಿಸುತ್ತದೆ. ಲಭ್ಯತೆ ಆಧರಿಸಿ ಅವರಿಗೆ ಕೇಂದ್ರ ಹಂಚಿಕೆ ಮಾಡಲಾಗುವುದು. ಇದರಿಂದ ಪ್ರತಿ ವರ್ಷ ಪರೀಕ್ಷೆ ಬರೆಯಲು ಸಾಕಷ್ಟು ಸಮಯ, ಹಣ, ಶ್ರಮ ವ್ಯಯಿಸುತ್ತ, ಅಭ್ಯರ್ಥಿಗಳ ಕಷ್ಟವನ್ನು ದೂರ ಮಾಡಲು ಸಾಧ್ಯವಾಗುತ್ತೆ ಎಂದು ಸಚಿವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

15 minutes ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

4 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

4 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

7 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

17 hours ago