ಪುತ್ತೂರಿನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ | ಜುಲೈ 24 – 31: ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಆಯೋಜನೆ

July 21, 2025
10:46 PM

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.

ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪಶುಪತಿ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.

ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror