ಪುತ್ತೂರಿನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ | ಜುಲೈ 24 – 31: ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಆಯೋಜನೆ

July 21, 2025
10:46 PM

ಪುತ್ತೂರಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.

ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪಶುಪತಿ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.

ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror