ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿ

November 12, 2025
6:57 AM

ಸುಳ್ಯದಲ್ಲಿ ಮಡಪ್ಪಾಡಿಯಲ್ಲಿ ಕೃಷಿಕರಿಗೆ ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿಯನ್ನು ನೀಡಲಾಯಿತು.

ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಡಪ್ಪಾಡಿ,  ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ಹಾಗೂ  3F ಆಯಿಲ್ ಪಾಮ್ ಪ್ರೈ. ಲಿ., ದ. ಕ., ಉಡುಪಿ ಸಹಯೋಗ ದಲ್ಲಿ ಯುವಕ ಮಂಡಲ ಸಭಾಭವನದಲ್ಲಿ ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ನೀಡಲಾಯಿತು.

ತಾಳೆ ಕೃಷಿಯ ವಿಧಾನ, ಪೋಷಣೆ, ಕಂಪನಿ ನೀಡುವ ಸಹಕಾರ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯ ಗಳ ಕುರಿತು ಮಾಹಿತಿ ನೀಡಲಾಯಿತು. ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ರೇಷ್ಮೆ ಹಾಗೂ ಗೇರುಕೃಷಿಯ ಕುರಿತು ಪ್ರಾಥಮಿಕ ಮಾಹಿತಿ ನೀಡಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೃಷಿಕರಿಗೆ ಸಿಗುವ ಸಬ್ಸಿಡಿ ಹಾಗೂ ಸೌಲಭ್ಯಗಳ ವಿಷಯ ತಿಳಿಸಲಾಯಿತು.

ಶ್ವೇತಾ ಅವರು ಸಂಜೀವಿನಿ ಯೋಜನೆಯ ಮೂಲಕ ಸ್ವ ಉದ್ಯೋಗ ಹಾಗೂ ತರಬೇತಿ ಅವಕಾಶ ಗಳ ಬಗ್ಗೆ ಮಾತನಾಡಿ, ಅಗತ್ಯವಿದ್ದರೆ ಬೇಡಿಕೆ ಸಲ್ಲಿಸಲು ಹೇಳಿದರು. ಲೋಕೋಸ್ ಐಡಿ ಪ್ರಾಮುಖ್ಯತೆ ಹಾಗೂ ಸಂಜೀವಿನಿ ಸಂಘದ ಸದಸ್ಯತ್ವದ ಮೂಲಕ ಸಿಗುವ ಹಲವಾರು ಸೌಲಭ್ಯಗಳ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಬ್ಯಾಂಕ್ ಸಾಲ ಪಡೆಯಬಹುದೆಂದು ಹೇಳಿದರು.

ಇದೇ ವೇಳೆ  MSME, FSSAI ಮತ್ತು ಸ್ವ ಸಹಾಯ ಸಂಘ ಸದಸ್ಯೆಯರಿಗೆ ಸಂಜೀವಿನಿ ಮೂಲಕ ಸಿಗುವ ಉತ್ತೇಜನಗಳ ವಿಷಯ ತಿಳಿಸಲಾಯಿತು. ಯಾವುದೇ ಕೃಷಿ ಸಂಬಂಧಿತ ಮಾಹಿತಿ ಅಥವಾ ತರಬೇತಿ ಅಗತ್ಯವಿದ್ದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಲು ಅವಕಾಶವಿದೆ ಎಂದು ತಿಳಿಸಲಾಯಿತು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಎಂ.ಸಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಹೆಚ್, ಎನ್.ಆರ್.ಎಲ್.ಎಂ. ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ವೇತಾ, ತಾಳೆ ಕೃಷಿ ಕ್ಲಸ್ಟರ್ ಸೂಪರ್ವೈಸರ್ ರವಿಶಂಕರ, ಕೃಷ್ಣ ವೈ.ಟಿ (ಉಡುಪಿ, ದ.ಕ. ಏರಿಯಾ ಮ್ಯಾನೇಜರ್ – 3F ಆಯಿಲ್ ಪಾಮ್ ಪ್ರೈ. ಲಿ.) ಹಾಗೂ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ), ತಾಳೆ ಕೃಷಿಕೆ ಚಂದ್ರಮತಿ ಪಿ. ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ಅವಿನಾಶ್, ಬ್ಲಾಕ್ ಮ್ಯಾನೇಜರ್ ಮೇರಿ, ಎಂ.ಬಿ.ಕೆ, ಎಲ್ ಸಿ ಆರ್ ಪಿ, ಕೃಷಿ ಸಖಿ, ಪಶುಸಖಿ, ಬಿ.ಸಿ ಸಖಿ, ಪದಾಧಿಕಾರಿಗಳು, ಸದಸ್ಯೆಯರು, ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror