Advertisement
ಸುದ್ದಿಗಳು

ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿ

Share

ಸುಳ್ಯದಲ್ಲಿ ಮಡಪ್ಪಾಡಿಯಲ್ಲಿ ಕೃಷಿಕರಿಗೆ ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿಯನ್ನು ನೀಡಲಾಯಿತು.

Advertisement
Advertisement

ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಡಪ್ಪಾಡಿ,  ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ಹಾಗೂ  3F ಆಯಿಲ್ ಪಾಮ್ ಪ್ರೈ. ಲಿ., ದ. ಕ., ಉಡುಪಿ ಸಹಯೋಗ ದಲ್ಲಿ ಯುವಕ ಮಂಡಲ ಸಭಾಭವನದಲ್ಲಿ ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ನೀಡಲಾಯಿತು.

ತಾಳೆ ಕೃಷಿಯ ವಿಧಾನ, ಪೋಷಣೆ, ಕಂಪನಿ ನೀಡುವ ಸಹಕಾರ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯ ಗಳ ಕುರಿತು ಮಾಹಿತಿ ನೀಡಲಾಯಿತು. ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ರೇಷ್ಮೆ ಹಾಗೂ ಗೇರುಕೃಷಿಯ ಕುರಿತು ಪ್ರಾಥಮಿಕ ಮಾಹಿತಿ ನೀಡಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೃಷಿಕರಿಗೆ ಸಿಗುವ ಸಬ್ಸಿಡಿ ಹಾಗೂ ಸೌಲಭ್ಯಗಳ ವಿಷಯ ತಿಳಿಸಲಾಯಿತು.

ಶ್ವೇತಾ ಅವರು ಸಂಜೀವಿನಿ ಯೋಜನೆಯ ಮೂಲಕ ಸ್ವ ಉದ್ಯೋಗ ಹಾಗೂ ತರಬೇತಿ ಅವಕಾಶ ಗಳ ಬಗ್ಗೆ ಮಾತನಾಡಿ, ಅಗತ್ಯವಿದ್ದರೆ ಬೇಡಿಕೆ ಸಲ್ಲಿಸಲು ಹೇಳಿದರು. ಲೋಕೋಸ್ ಐಡಿ ಪ್ರಾಮುಖ್ಯತೆ ಹಾಗೂ ಸಂಜೀವಿನಿ ಸಂಘದ ಸದಸ್ಯತ್ವದ ಮೂಲಕ ಸಿಗುವ ಹಲವಾರು ಸೌಲಭ್ಯಗಳ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಬ್ಯಾಂಕ್ ಸಾಲ ಪಡೆಯಬಹುದೆಂದು ಹೇಳಿದರು.

ಇದೇ ವೇಳೆ  MSME, FSSAI ಮತ್ತು ಸ್ವ ಸಹಾಯ ಸಂಘ ಸದಸ್ಯೆಯರಿಗೆ ಸಂಜೀವಿನಿ ಮೂಲಕ ಸಿಗುವ ಉತ್ತೇಜನಗಳ ವಿಷಯ ತಿಳಿಸಲಾಯಿತು. ಯಾವುದೇ ಕೃಷಿ ಸಂಬಂಧಿತ ಮಾಹಿತಿ ಅಥವಾ ತರಬೇತಿ ಅಗತ್ಯವಿದ್ದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಲು ಅವಕಾಶವಿದೆ ಎಂದು ತಿಳಿಸಲಾಯಿತು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಎಂ.ಸಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಹೆಚ್, ಎನ್.ಆರ್.ಎಲ್.ಎಂ. ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ವೇತಾ, ತಾಳೆ ಕೃಷಿ ಕ್ಲಸ್ಟರ್ ಸೂಪರ್ವೈಸರ್ ರವಿಶಂಕರ, ಕೃಷ್ಣ ವೈ.ಟಿ (ಉಡುಪಿ, ದ.ಕ. ಏರಿಯಾ ಮ್ಯಾನೇಜರ್ – 3F ಆಯಿಲ್ ಪಾಮ್ ಪ್ರೈ. ಲಿ.) ಹಾಗೂ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ), ತಾಳೆ ಕೃಷಿಕೆ ಚಂದ್ರಮತಿ ಪಿ. ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ಅವಿನಾಶ್, ಬ್ಲಾಕ್ ಮ್ಯಾನೇಜರ್ ಮೇರಿ, ಎಂ.ಬಿ.ಕೆ, ಎಲ್ ಸಿ ಆರ್ ಪಿ, ಕೃಷಿ ಸಖಿ, ಪಶುಸಖಿ, ಬಿ.ಸಿ ಸಖಿ, ಪದಾಧಿಕಾರಿಗಳು, ಸದಸ್ಯೆಯರು, ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

9 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

9 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

9 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

9 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

9 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

19 hours ago