Advertisement
ಸುದ್ದಿಗಳು

ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿ

Share

ಸುಳ್ಯದಲ್ಲಿ ಮಡಪ್ಪಾಡಿಯಲ್ಲಿ ಕೃಷಿಕರಿಗೆ ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿಯನ್ನು ನೀಡಲಾಯಿತು.

ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಡಪ್ಪಾಡಿ,  ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ಹಾಗೂ  3F ಆಯಿಲ್ ಪಾಮ್ ಪ್ರೈ. ಲಿ., ದ. ಕ., ಉಡುಪಿ ಸಹಯೋಗ ದಲ್ಲಿ ಯುವಕ ಮಂಡಲ ಸಭಾಭವನದಲ್ಲಿ ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ನೀಡಲಾಯಿತು.

ತಾಳೆ ಕೃಷಿಯ ವಿಧಾನ, ಪೋಷಣೆ, ಕಂಪನಿ ನೀಡುವ ಸಹಕಾರ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯ ಗಳ ಕುರಿತು ಮಾಹಿತಿ ನೀಡಲಾಯಿತು. ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ರೇಷ್ಮೆ ಹಾಗೂ ಗೇರುಕೃಷಿಯ ಕುರಿತು ಪ್ರಾಥಮಿಕ ಮಾಹಿತಿ ನೀಡಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೃಷಿಕರಿಗೆ ಸಿಗುವ ಸಬ್ಸಿಡಿ ಹಾಗೂ ಸೌಲಭ್ಯಗಳ ವಿಷಯ ತಿಳಿಸಲಾಯಿತು.

ಶ್ವೇತಾ ಅವರು ಸಂಜೀವಿನಿ ಯೋಜನೆಯ ಮೂಲಕ ಸ್ವ ಉದ್ಯೋಗ ಹಾಗೂ ತರಬೇತಿ ಅವಕಾಶ ಗಳ ಬಗ್ಗೆ ಮಾತನಾಡಿ, ಅಗತ್ಯವಿದ್ದರೆ ಬೇಡಿಕೆ ಸಲ್ಲಿಸಲು ಹೇಳಿದರು. ಲೋಕೋಸ್ ಐಡಿ ಪ್ರಾಮುಖ್ಯತೆ ಹಾಗೂ ಸಂಜೀವಿನಿ ಸಂಘದ ಸದಸ್ಯತ್ವದ ಮೂಲಕ ಸಿಗುವ ಹಲವಾರು ಸೌಲಭ್ಯಗಳ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಬ್ಯಾಂಕ್ ಸಾಲ ಪಡೆಯಬಹುದೆಂದು ಹೇಳಿದರು.

ಇದೇ ವೇಳೆ  MSME, FSSAI ಮತ್ತು ಸ್ವ ಸಹಾಯ ಸಂಘ ಸದಸ್ಯೆಯರಿಗೆ ಸಂಜೀವಿನಿ ಮೂಲಕ ಸಿಗುವ ಉತ್ತೇಜನಗಳ ವಿಷಯ ತಿಳಿಸಲಾಯಿತು. ಯಾವುದೇ ಕೃಷಿ ಸಂಬಂಧಿತ ಮಾಹಿತಿ ಅಥವಾ ತರಬೇತಿ ಅಗತ್ಯವಿದ್ದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಲು ಅವಕಾಶವಿದೆ ಎಂದು ತಿಳಿಸಲಾಯಿತು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಎಂ.ಸಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಹೆಚ್, ಎನ್.ಆರ್.ಎಲ್.ಎಂ. ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ವೇತಾ, ತಾಳೆ ಕೃಷಿ ಕ್ಲಸ್ಟರ್ ಸೂಪರ್ವೈಸರ್ ರವಿಶಂಕರ, ಕೃಷ್ಣ ವೈ.ಟಿ (ಉಡುಪಿ, ದ.ಕ. ಏರಿಯಾ ಮ್ಯಾನೇಜರ್ – 3F ಆಯಿಲ್ ಪಾಮ್ ಪ್ರೈ. ಲಿ.) ಹಾಗೂ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ), ತಾಳೆ ಕೃಷಿಕೆ ಚಂದ್ರಮತಿ ಪಿ. ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ಅವಿನಾಶ್, ಬ್ಲಾಕ್ ಮ್ಯಾನೇಜರ್ ಮೇರಿ, ಎಂ.ಬಿ.ಕೆ, ಎಲ್ ಸಿ ಆರ್ ಪಿ, ಕೃಷಿ ಸಖಿ, ಪಶುಸಖಿ, ಬಿ.ಸಿ ಸಖಿ, ಪದಾಧಿಕಾರಿಗಳು, ಸದಸ್ಯೆಯರು, ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

5 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

11 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

11 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

22 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

22 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago