Advertisement
ಸುದ್ದಿಗಳು

ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿ

Share

ಸುಳ್ಯದಲ್ಲಿ ಮಡಪ್ಪಾಡಿಯಲ್ಲಿ ಕೃಷಿಕರಿಗೆ ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿಯನ್ನು ನೀಡಲಾಯಿತು.

ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಡಪ್ಪಾಡಿ,  ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ಹಾಗೂ  3F ಆಯಿಲ್ ಪಾಮ್ ಪ್ರೈ. ಲಿ., ದ. ಕ., ಉಡುಪಿ ಸಹಯೋಗ ದಲ್ಲಿ ಯುವಕ ಮಂಡಲ ಸಭಾಭವನದಲ್ಲಿ ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ನೀಡಲಾಯಿತು.

ತಾಳೆ ಕೃಷಿಯ ವಿಧಾನ, ಪೋಷಣೆ, ಕಂಪನಿ ನೀಡುವ ಸಹಕಾರ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯ ಗಳ ಕುರಿತು ಮಾಹಿತಿ ನೀಡಲಾಯಿತು. ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ರೇಷ್ಮೆ ಹಾಗೂ ಗೇರುಕೃಷಿಯ ಕುರಿತು ಪ್ರಾಥಮಿಕ ಮಾಹಿತಿ ನೀಡಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೃಷಿಕರಿಗೆ ಸಿಗುವ ಸಬ್ಸಿಡಿ ಹಾಗೂ ಸೌಲಭ್ಯಗಳ ವಿಷಯ ತಿಳಿಸಲಾಯಿತು.

ಶ್ವೇತಾ ಅವರು ಸಂಜೀವಿನಿ ಯೋಜನೆಯ ಮೂಲಕ ಸ್ವ ಉದ್ಯೋಗ ಹಾಗೂ ತರಬೇತಿ ಅವಕಾಶ ಗಳ ಬಗ್ಗೆ ಮಾತನಾಡಿ, ಅಗತ್ಯವಿದ್ದರೆ ಬೇಡಿಕೆ ಸಲ್ಲಿಸಲು ಹೇಳಿದರು. ಲೋಕೋಸ್ ಐಡಿ ಪ್ರಾಮುಖ್ಯತೆ ಹಾಗೂ ಸಂಜೀವಿನಿ ಸಂಘದ ಸದಸ್ಯತ್ವದ ಮೂಲಕ ಸಿಗುವ ಹಲವಾರು ಸೌಲಭ್ಯಗಳ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಬ್ಯಾಂಕ್ ಸಾಲ ಪಡೆಯಬಹುದೆಂದು ಹೇಳಿದರು.

ಇದೇ ವೇಳೆ  MSME, FSSAI ಮತ್ತು ಸ್ವ ಸಹಾಯ ಸಂಘ ಸದಸ್ಯೆಯರಿಗೆ ಸಂಜೀವಿನಿ ಮೂಲಕ ಸಿಗುವ ಉತ್ತೇಜನಗಳ ವಿಷಯ ತಿಳಿಸಲಾಯಿತು. ಯಾವುದೇ ಕೃಷಿ ಸಂಬಂಧಿತ ಮಾಹಿತಿ ಅಥವಾ ತರಬೇತಿ ಅಗತ್ಯವಿದ್ದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಲು ಅವಕಾಶವಿದೆ ಎಂದು ತಿಳಿಸಲಾಯಿತು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಎಂ.ಸಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಹೆಚ್, ಎನ್.ಆರ್.ಎಲ್.ಎಂ. ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ವೇತಾ, ತಾಳೆ ಕೃಷಿ ಕ್ಲಸ್ಟರ್ ಸೂಪರ್ವೈಸರ್ ರವಿಶಂಕರ, ಕೃಷ್ಣ ವೈ.ಟಿ (ಉಡುಪಿ, ದ.ಕ. ಏರಿಯಾ ಮ್ಯಾನೇಜರ್ – 3F ಆಯಿಲ್ ಪಾಮ್ ಪ್ರೈ. ಲಿ.) ಹಾಗೂ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ), ತಾಳೆ ಕೃಷಿಕೆ ಚಂದ್ರಮತಿ ಪಿ. ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ಅವಿನಾಶ್, ಬ್ಲಾಕ್ ಮ್ಯಾನೇಜರ್ ಮೇರಿ, ಎಂ.ಬಿ.ಕೆ, ಎಲ್ ಸಿ ಆರ್ ಪಿ, ಕೃಷಿ ಸಖಿ, ಪಶುಸಖಿ, ಬಿ.ಸಿ ಸಖಿ, ಪದಾಧಿಕಾರಿಗಳು, ಸದಸ್ಯೆಯರು, ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

6 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

13 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

19 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago