Advertisement
MIRROR FOCUS

ಅಡಿಕೆ ಹಳದಿ ಎಲೆರೋಗ ಪ್ರದೇಶದಲ್ಲಿ ಪರ್ಯಾಯ ಬೆಳೆ | ಹಣ್ಣಿನ ಕೃಷಿಯ ಬಗ್ಗೆ ಮಾಹಿತಿ | ತೋಟಗಾರಿಕಾ ಇಲಾಖೆ-ಸಹಕಾರಿ ಸಂಘದಿಂದ ಜಾಗೃತಿ ಕಾರ್ಯಕ್ರಮ | ಮಾರುಕಟ್ಟೆಗೆ ಸಹಕಾರಿ ಸಂಘ ಸ್ಥಾಪನೆಯ ಕಡೆಗೂ ಯೋಚನೆ |

Share

ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಈಗ ಅಡಿಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗುತ್ತಿದೆ. ಸುಳ್ಯದಲ್ಲಿ ಅಡಿಕೆಗೆ ಹಳದಿ ಎಲೆರೋಗದ ಆತಂಕವಾದರೆ, ಕೆಲವು ಕಡೆ ಎಲೆಚುಕ್ಕಿ ರೋಗದ ಭೀತಿ. ಇದೆಲ್ಲದರ ಜೊತೆಗೆ ಈಗ ಅಡಿಕೆ ಬೆಳೆವಿಸ್ತರಣೆಯ ವೇಗದಲ್ಲಿ ಮಾರುಕಟ್ಟೆಯ ಬಗ್ಗೆಯೂ ಆತಂಕ ಆರಂಭವಾಗಿದೆ.

ಇಂತಹ ಸಂದರ್ಭದಲ್ಲಿ ಪರ್ಯಾಯ ಬೆಳೆಯ ಬಗ್ಗೆ ಕೃಷಿಕರಿಗೆ ಮಾಹಿತಿ , ಜಾಗೃತಿ ನೀಡುವುದು ಅಗತ್ಯ ಇದೆ. ಈ ಕೆಲಸವನ್ನು  ವಿವಿಧ ಸಹಕಾರಿ ಸಂಘಗಳು, ಸಂಘಟನೆಗಳು ಮಾಡುತ್ತಿವೆ. ಅದರಲ್ಲಿ ಸುಳ್ಯ ತೋಟಗಾರಿಕಾ ಇಲಾಖೆ ಹಾಗೂ ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘವು ಈಗ ಎರಡನೇ ಬಾರಿಗೆ ತಮ್ಮ ವ್ಯಾಪ್ತಿಯ ಕೃಷಿಕರಿಗೆ ಮಾಹಿತಿ ನೀಡುವ ಕೆಲಸ ಮಾಡಿದೆ.ಅದರ ಜೊತೆಗೆ ಹಣ್ಣು ಕೃಷಿಯಲ್ಲಿ ಹಣ್ಣುಗಳ ಮಾರುಕಟ್ಟೆಗೂ ಸಹಕಾರಿ ಸಂಘ ಸ್ಥಾಪನೆಯ ಬಗ್ಗೆಯೂ ಯೋಚನೆ ನಡೆಯುತ್ತಿದೆ.

ಒಂದು ಕಡೆ ಅಡಿಕೆ ಬೆಳೆ ವಿಸ್ತರಣೆ ವಿಪರೀತವಾಗುತ್ತಿದೆ . ಇನ್ನೊಂದು ಕಡೆ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತದೆ. ಮತ್ತೊಂದು ಕಡೆ ಅಡಿಕೆ ಮಾರುಕಟ್ಟೆ ಬಗ್ಗೆ ಅಸ್ಥಿರತೆ ಉಂಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ಸರಿಯಾದ ಮಾರ್ಗದರ್ಶನ, ಪರ್ಯಾಯ ಕೃಷಿಯ ಬಗ್ಗೆ ಅರಿವು, ಜಾಗೃತಿ ಮೂಡಿಸಬೇಕಾದ್ದು ಕೂಡಾ ಅಗತ್ಯ ಇದೆ. ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆಯು ಸರ್ಕಾರದ ಯೋಜನೆ, ಅನುದಾನ, ಸಹಕಾರದ ಬಗ್ಗೆ ಮಾಹಿತಿ ನೀಡಿದರೆ, ಕೃಷಿಕರ ಜೊತೆಗೆ ನಾವಿದ್ದೇವೆ ಎನ್ನಬೇಕಾದ್ದು ಸಹಕಾರ ಸಂಘಗಳು ಹಾಗೂ ಪ್ರಮುಖ ಸಂಘಗಳು. ಕೃಷಿ ಪರವಾಗಿರುವ ವ್ಯಕ್ತಿಗಳು.  ಈಗ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘವು ತನ್ನ ವ್ಯಾಪ್ತಿಯ ಕೃಷಿಕರಿಗೆ ಅಡಿಕೆ ಬೆಳೆಯ ಜೊತೆಗೆ ಪರ್ಯಾಯ ಬೆಳೆಯ ಬಗ್ಗೆಯೂ ಅರಿವು ಮೂಡಿಸುತ್ತಿದೆ. ಈ ಸಹಕಾರಿ ಸಂಘದ ವ್ಯಾಪ್ತಿಯಲ್ಲೂ ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಕಂಡುಬಂದಿದೆ. ಕೆಲವು ಕೃಷಿಕರು ಸಂಕಷ್ಟದಲ್ಲಿದ್ದಾರೆ.

ಆರಂಭದಲ್ಲಿ ತೋಟಗಾರಿಕಾ ಇಲಾಖೆಯು ಹಣ್ಣು ಕೃಷಿಯ ಬಗ್ಗೆ ಮಾಹಿತಿ ನೀಡಿತು. ಇದಕ್ಕಾಗಿ ಐಐಎಚ್‌ಆರ್‌ ನ ವಿಜ್ಞಾನಿ ಡಾ. ಮುರಳಿ ಅವರು ರಂಬುಟಾನ್‌ ಹಣ್ಣಿನ ಕೃಷಿ ಸಹಿತ ವಿವಿಧ ಹಣ್ಣಿನ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಮಲೆನಾಡಿನಲ್ಲಿ, ಅಡಿಕೆ ಬೆಳೆಯ ಜೊತೆಗೆ ಯಾವುದೆಲ್ಲಾ ಹಣ್ಣಿನ ಕೃಷಿಯನ್ನು ಬೆಳೆಸಬಹುದು ಎಂದು ಮಾಹಿತಿ ನೀಡಿದರು.

ಅಡಿಕೆ ಜೊತೆಗೆ ಕಾಳುಮೆಣಸು, ಜಾಯಿಕಾಯಿ ಕೃಷಿಯನ್ನು ಹೇಗೆ ಬೆಳೆಯಬಹುದು ಎಂದು ಕಲ್ಮಡ್ಕದ ಕೃಷಿಕ ಸುರೇಶ್ಚಂದ್ರ ತೊಟ್ಟೆತ್ತೋಡಿ ಅವರು ಮಾಹಿತಿ ನೀಡಿದರು. ಅಡಿಕೆಯ ಜೊತೆಗೆ ಉಪಬೆಳೆಯಾಗಿಯೂ, ಪ್ರಮುಖ ಬೆಳೆಯಾಗಿಯೂ ಹೇಗೆ ಬೆಳೆಯಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್‌ ಮೂಲೆತೋಟ ಅವರು ಕೃಷಿಕರಿಗೆ ಧೈರ್ಯ ತುಂಬಿದರು. ಅಡಿಕೆಯ ಜೊತೆಗೆ ಪರ್ಯಾಯ ಕೃಷಿಯನ್ನು ಈಗಲೇ ಬೆಳೆಯುವುದಕ್ಕೆ ಆರಂಭಿಸಬೇಕಿದೆ. ವಿವಿಧ ರೋಗಗಳು ಅಡಿಕೆಯನ್ನು ಕಾಡುತ್ತಿರುವಾಗ ಆಹಾರ ಬೆಳೆಯ ಸಾಲಿನಲ್ಲಿರುವ ಹಣ್ಣಿನ  ಕೃಷಿಯ ಕಡೆಗೆ ಆಸಕ್ತರಾಗಬೇಕು  ಎಂದರು. ಹಣ್ಣಿನ ಬೆಳೆಗಳ ಮಾರುಕಟ್ಟೆ ಬಗ್ಗೆಯೂ ಯೋಜನೆ ತಿಳಿಸಿದ ವಿಷ್ಣು ಭಟ್‌ ಅವರು, ಸಹಕಾರಿ ಸಂಸ್ಥೆಯ ಮಾದರಿಯಲ್ಲಿಯೇ ಹಣ್ಣಿನ ಕೃಷಿಯಲ್ಲಿ ಹಣ್ಣು ಬೆಳೆಗಳ ಮಾರಾಟ ಮತ್ತು ಮೌಲ್ಯವರ್ಧನೆಗೆ ಸಹಕಾರಿ ಸಂಘ ಸ್ಥಾಪನೆ ಬಗ್ಗೆಯೂ ಯೋಚನೆ ನಡೆಸಲಾಗಿದೆ. ಭವಿಷ್ಯದಲ್ಲಿ ಅಡಿಕೆಯ ಬೆಳೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗದಂತಹ ರೋಗಗಳು ಕಾಡುವ ವೇಳೆ ಅಡಿಕೆ  ಜೊತೆಗೆ ಅಥವಾ ಅಡಿಕೆಗೆ ಪರ್ಯಾಯವಾಗಿ ಇನ್ನೊಂದು ಕೃಷಿ ಅಗತ್ಯ ಇದೆ, ಮಾರುಕಟ್ಟೆಯ ಬಗ್ಗೆ ಆಗಲೂ ದಿಟ್ಟ ನಿರ್ಧಾರ ಅಗತ್ಯ ಇದೆ  ಎಂದು ವಿಷ್ಣು ಭಟ್‌ ಅವರು ಕೃಷಿಕರಿಗೆ ಧೈರ್ಯ ತುಂಬಿದರು.

ಎಲ್ಲೆಡೆ ಅಡಿಕೆ ಬೆಳೆ ವಿಸ್ತರಣೆಯ ವೇಗ ಇದ್ದರೆ, ಧಾರಣೆಯ ಅಸ್ಥಿರತೆ ಈಗಾಗಲೇ ಆರಂಭವಾಗಿದೆ. ಸುಳ್ಯದಂತಹ ಪ್ರದೇಶದಲ್ಲಿ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿರೋಗ ಹರಡುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಕೃಷಿಕರು ಧೈರ್ಯದಿಂದ  ಎದುರಿಸಿ ಮುನ್ನಡೆಯುವುದು ಹಾಗೂ ಸಹಕಾರಿ ಸಂಘಗಳೂ , ತೋಟಗಾರಿಕಾ ಇಲಾಖೆಯೂ ರೈತರ ಜೊತೆ ನಿಲ್ಲುವ ಕೆಲಸ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.

Horticulture Department and cooperative societies are conducting various programs to make farmers interested in fruit cultivation along with Arecanut cultivation.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

4 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

8 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

9 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

11 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

12 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

13 hours ago