Advertisement
MIRROR FOCUS

ಕೋಲಾರದಲ್ಲಿ ಹಾಲು ಉತ್ಪಾದಕರಿಗೆ 2 ರೂ. ಕಡಿತ | ಇಂದಿನಿಂದಲೇ ಜಾರಿ, ಹಾಲು ಉತ್ಪಾದಕರು ಕಂಗಾಲು

Share

ಕಳೆದ ವಾರ ರಾಜ್ಯ ಸರ್ಕಾರ(State Govt) ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿ ರಾಜ್ಯದ ಜನರಿಗೆ ಹಾಲಿಗೆ ಧಾರಣೆ ಹೆಚ್ಚಳ ಎನ್ನುವ ಭಾವನೆ ಮೂಡಿಸಿತ್ತು.  ಆದರೆ ಈ ಏರಿಕೆಯಲ್ಲಿ ರೈತರಿಗೆ ಪ್ರಯೋಜನ ದೊರೆಯಲಿದೆ ಎಂದು ಹೇಳಿ ಸಮಾಧಾನಗೊಳಿಸಲಾಗಿತ್ತು. ಆದರೆ ಇದೀಗ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಸಿ ಮುಟ್ಟಿಸಿದೆ. 

ಕೋಚಿಮುಲ್ ಆಡಳಿತ ಮಂಡಳಿ ದಿಢೀರ್‌ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ. ಈ ಮೊದಲು ಪ್ರತಿ ಲೀಟರ್‌ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್‌ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ.

ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್‌ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

3 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

3 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

3 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

3 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago