Advertisement
MIRROR FOCUS

ಕೋಲಾರದಲ್ಲಿ ಹಾಲು ಉತ್ಪಾದಕರಿಗೆ 2 ರೂ. ಕಡಿತ | ಇಂದಿನಿಂದಲೇ ಜಾರಿ, ಹಾಲು ಉತ್ಪಾದಕರು ಕಂಗಾಲು

Share

ಕಳೆದ ವಾರ ರಾಜ್ಯ ಸರ್ಕಾರ(State Govt) ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿ ರಾಜ್ಯದ ಜನರಿಗೆ ಹಾಲಿಗೆ ಧಾರಣೆ ಹೆಚ್ಚಳ ಎನ್ನುವ ಭಾವನೆ ಮೂಡಿಸಿತ್ತು.  ಆದರೆ ಈ ಏರಿಕೆಯಲ್ಲಿ ರೈತರಿಗೆ ಪ್ರಯೋಜನ ದೊರೆಯಲಿದೆ ಎಂದು ಹೇಳಿ ಸಮಾಧಾನಗೊಳಿಸಲಾಗಿತ್ತು. ಆದರೆ ಇದೀಗ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಸಿ ಮುಟ್ಟಿಸಿದೆ. 

ಕೋಚಿಮುಲ್ ಆಡಳಿತ ಮಂಡಳಿ ದಿಢೀರ್‌ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ. ಈ ಮೊದಲು ಪ್ರತಿ ಲೀಟರ್‌ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್‌ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ.

ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್‌ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

48 minutes ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

59 minutes ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

1 hour ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

1 hour ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

11 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago