ಮಂಡ್ಯ ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿಎಪಿ, ಎಂಓಪಿ, ಎಸ್ಎಸ್ ಪಿ, ಕಾಂಪ್ಲೆಕ್ಸ್ ಸೇರಿದಂತೆ 24471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ರಸಗೊಬ್ಬರ ಸಮರ್ಪಕವಾಗಿ ನಿರ್ವಹಣೆ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕುವಾರು ತಹಶೀಲ್ದಾರ್ ಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರ ದಾಸ್ತಾನುಗಳ ಉಳಿಕೆ , ಗೊಬ್ಬರಗಳ ದರ ನಮೂದಿಸಿರುವ ಬಗ್ಗೆ ಪರಿಶೀಲಿಸಿಸುವಂತೆ ತಿಳಿಸಿದ್ದಾರೆ. ಕಾಳಸಂತೆ ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…